ನೂರು ಮರ ನೂರು ಸ್ವರ

Author : ಕೀರ್ತಿನಾಥ ಕುರ್ತಕೋಟಿ

Pages 430

₹ 400.00




Year of Publication: 2015
Published by: ಕುರ್ತಕೋಟಿ ಮೆಮೊರಿಯಲ್ ಟ್ರಸ್ಟ್
Address: ಧಾರವಾಡ

Synopsys

ಈ ಗ್ರಂಥದಲ್ಲಿ ಆಧುನಿಕ ಕನ್ನಡ ಸಾಹಿತ್ಯದ ಬೆಳವಣಿಗೆ ಮತ್ತು ವಿವಿಧ ಪ್ರಯೋಗಗಳ ಬಗ್ಗೆ ಹಾಗೂ ಅದರ ಆಶೋತ್ತರಗಳ ಬಗ್ಗೆ ವಿವರವಾಗಿ ಬರೆಯಲಾಗದ್ದು,ಆಧುನಿಕ ಕನ್ನಡ ಲೇಖಕರ ಹಾಗೂ ಕೆಲವು ಮಹತ್ವದ ಕೃತಿಗಳ ಬಗ್ಗೆ ಆಳವಾದ ವಿಶ್ಲೇಷಣೆಯನ್ನು ಒದಗಿಸಲಾಗಿದೆ. ಈ ಕೃತಿಯು ಒಳಗೊಂಡಿರುವ ಅಂಶಗಳೆಂದರೆ: ಹಳೆಗನ್ನಡ ಕವಿ ಕಾವ್ಯ ವಿಮರ್ಶೆ, ಪ್ರಾಚೀನ ಕವಿ ಕಾವ್ಯ ವಿಮರ್ಶೆ, ನವೋದಯ ಸಾಹಿತ್ಯ ವಿಮರ್ಶೆ, ಪ್ರಗತಿಶೀಲ ನವ್ಯ ಬಂಡಾಯ ಸಾಹಿತ್ಯ ಕಾಲಘಟ್ಟದ ಸಾಹಿತ್ಯ ವಿಮರ್ಶೆ.

ಮೊದಲ ಮುದ್ರಣ: ಕನ್ನಡ ವಿಶ್ವವಿದ್ಯಾಲಯ, ಹಂಪಿ (1998)

 

About the Author

ಕೀರ್ತಿನಾಥ ಕುರ್ತಕೋಟಿ
(12 October 1928)

ಕವಿ, ನಾಟಕಕಾರ, ವಿಮರ್ಶಕ, ಅನುವಾದಕ, ಅಂಕಣಕಾರ ಕೀರ್ತಿನಾಥ ಕುರ್ತಕೋಟಿ ಅವರು  12-10-1928ರಂದು ಗದಗಿನಲ್ಲಿ ಜನಿಸಿದರು. ತಂದೆ ಡಿ.ಕೆ.ಕುರ್ತಕೋಟಿ, ತಾಯಿ-ಪದ್ಮಾವತಿಬಾಯಿ. ಕೆಲಕಾಲ ಗದಗಿನ ಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಕುರ್ತಕೋಟಿಯವರು, ಸ್ನಾತಕೋತ್ತರ ಪದವಿಯನ್ನು ಪಡೆದು, ಗುಜರಾತಿಗೆ ತೆರಳಿ ಅಲ್ಲಿ ಕಾಲೇಜು ಉಪನ್ಯಾಸಕರಾಗಿ ವೃತ್ತಿಯನ್ನು ಕೈಗೊಂಡರು. ಅಲ್ಲಿ ನಿವೃತ್ತಿಯನ್ನು ಪಡೆದ ನಂತರವೇ ಧಾರವಾಡಕ್ಕೆ ಮರಳಿದರು. ಜಿ.ಬಿ.ಜೋಶಿಯವರ ಮನೋಹರ ಗ್ರಂಥಮಾಲೆಗೆ ಮೊದಲಿನಿಂದಲೂ ಸಾಹಿತ್ಯ ಸಲಹಾಕಾರರಾಗಿದ್ದರು. ಜೊತೆಗೆ ಪ್ರಜಾವಾಣಿಯಲ್ಲಿ ವಾರವಾರವೂ ಪ್ರಕಟವಾಗುತ್ತಿದ್ದ "ಉರಿಯ ನಾಲಗೆ" ಎಂಬ ಅಂಕಣ ಬಹಳ ಜನಪ್ರಿಯವಾಗಿತ್ತು. 1959ರಲ್ಲಿ ಮನೋಹರ ಗ್ರಂಥಮಾಲೆ ಹೊರತಂದ ತನ್ನ ರಜತ ವರ್ಷದ ಹೊತ್ತಿಗೆ “ನಡೆದು ...

READ MORE

Related Books