ನೋಟು ರದ್ಧತಿ ಮತ್ತು ನವ ಉದಾರವಾದಿ ಆರ್ಥಿಕ ನೀತಿ

Author : ನಾ. ದಿವಾಕರ

Pages 80

₹ 60.00




Year of Publication: 2017
Published by: ಲಡಾಯಿ ಪ್ರಕಾಶನ
Address: 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 9480286844

Synopsys

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್‌ 8ರ ರಾತ್ರಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತ ಸಾವಿರ ಮತ್ತು ಐದು ನೂರು ರೂಪಾಯಿ ನೋಟುಗಳ ಬಳಕೆ ನಿಷೇಧಿಸುವ ಘೋಷಣೆ ಮಾಡಿದರು. ನೋಟ್‌ ಬಂದಿಯಿಂದ ನೂರಾರು ಜನ ಜೀವ ಕಳೆದುಕೊಂಡರೆ ಸಾವಿರಾರು ಜನ ಸಂಕಷ್ಟಕ್ಕೆ ಒಳಗಾದರು. ಲಕ್ಷಾಂತರ ಜನ ನೌಕರಿ ಕಳೆದುಕೊಂಡರು ಹಾಗೆಯೇ ಉದ್ಯಮಗಳು ಮುಚ್ಚಿದವು. ಅಸಂಘಟಿತ ವಲಯ ನೆಲೆ ಕಳೆದುಕೊಂಡರೆ ಸಣ್ಣ ಉದ್ಯಮಗಳು ತಲೆ ಎತ್ತದಂತಾದವು. ನೋಟು ರದ್ದತಿಯನ್ನು ಕೇಂದ್ರವಾಗಿಟ್ಟು ನವ ಉದಾರವಾದಿ ನೀತಿ ಹೇಗೆ ಭಾರತವನ್ನು ನಿಯಂತ್ರಿಸುತ್ತದೆ ಎಂಬುದನ್ನು ಲೇಖಕರು ಈ ಪುಸ್ತಕದಲ್ಲಿ ಕಟ್ಟಿಕೊಟ್ಟಿದ್ದಾರೆ.

About the Author

ನಾ. ದಿವಾಕರ

ಚಿಂತಕ, ಲೇಖಕ ನಾ. ದಿವಾಕರ ಅವರು ಹುಟ್ಟಿದ ಊರು ಕೋಲಾರ ಜಿಲ್ಲೆಯ ಚಿಂತಾಮಣಿ. 1961ರಲ್ಲಿ ಜನಿಸಿದ ಅವರು ಬೆಳೆದದ್ದು ಅದೇ ಜಿಲ್ಲೆಯ ಬಂಗಾರಪೇಟೆಯಲ್ಲಿ. ಪೂರ್ಣ ವಿದ್ಯಾಭ್ಯಾಸ ಬಂಗಾರಪೇಟೆಯಲ್ಲಿ ಮುಗಿಸಿದ ಅವರು ಬಿಕಾಂ ವ್ಯಾಸಂಗವನ್ನು ಕೋಲಾರದ ಸರ್ಕಾರಿ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಗಾಯನ, ನಾಟಕಗಳಲ್ಲಿ ಆಸಕ್ತಿಯೊಂದಿದ್ದ ಅವರು, ಹಲವು ಗೀತ ಗಾಯನ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಿಹಿಸಿದ್ದಾರೆ. ತುರ್ತುಪರಿಸ್ಥಿತಿಯ ಸಂದರ್ಭದ ನಂತರ ರಾಜಕೀಯದತ್ತ ಒಲವು ತೊರಿದ ದಿವಾಕರ್ ಕ್ರಮೇಣ ದಲಿತ ಚಳುವಳಿ ಮತ್ತು ಮಾರ್ಕ್ಸ್ ವಾದಿ ಅಧ್ಯಯನದತ್ತ ಒಲವು ಬೆಳೆಸಿಕೊಂಡರು. 1982ರಲ್ಲಿ ಪದವಿ ಮುಗಿಸಿ 1984ರಲ್ಲಿ ಕೆನರಾಬ್ಯಾಂಕ್ ...

READ MORE

Related Books