ನೃಪತುಂಗ

Author : ತ.ರಾ.ಸು. (ತ.ರಾ. ಸುಬ್ಬರಾವ್)

Pages 210

₹ 115.00




Published by: ಹೇಮಂತ ಸಾಹಿತ್ಯ ಪ್ರಕಾಶನ
Address: ನಂ.972, ಸಿ, 4ನೇ ಇ ಬ್ಲಾಕ್, 10ನೇ ಮುಖ್ಯರಸ್ತೆ, ರಾಜಾಜಿನಗರ, ಬೆಂಗಳೂರು-560060\n

Synopsys

ರಾಜಧಾನಿಯಲ್ಲಿಷ್ಟೇ ಅಲ್ಲ, ಇಡೀ ದೇಶವೇ ಸಂತೋಷ ಪಡುತ್ತಿದೆ ೨ ಮಹೋತ್ಸವದ ಘಟನೆಗಳಿಂದ. ಆದರೆ ರಾಷ್ಟ್ರಕೂಟ ರಾಜ್ಯಕ್ಕೆ ವೆಂಗವಳ್ಳಿಯ ವಿಜಯ ಹಾಗು ರಾಜಪುತ್ರನ ಜನನ ಚಕ್ರವರ್ತಿ ನೃಪತುಂಗರಿಗೆ ಭೀತಿಗೆ ಕಾರಣವಾಗಿತ್ತು. ಜಿನಸೇನಾಚಾರ್ಯರ ಶಿಷ್ಯರಾದ ನೃಪತುಂಗ ಚಕ್ರವರ್ತಿಗಳು ಅಹಿಂಸೆ ಗರ್ವಶ್ರೇಷ್ಠವಾದ ಧರ್ಮ ಎಂಬ ಸಿದ್ಧಾಂತದ ಮೇಲೆ ರಾಜ್ಯವನ್ನಾಳುತ್ತಿದ್ದರು. ತಾವಾಗಿ ಯುದ್ಧಕ್ಕೆ, ರಕ್ತಪಾತಕ್ಕೆ ಹಾತೊರೆಯಬಾರದು, ಆದರೆ ಪ್ರಜಾಪಾಲನೆಗೆ ಅಗತ್ಯವಾದಾಗ ಯುದ್ಧಕ್ಕೆ ಹಿಂಜರಿಯುವ ಅರಸನನ್ನು ರಾಜ್ಯಲಕ್ಷ್ಮಿ ಹೇಸಿ ದೂರವಾಗುತ್ತಾಳೆ, ಆದ್ದರಿಂದ ಶತ್ರುವನ್ನಾಗಲಿ, ದುಷ್ಟಪುತ್ರನನ್ನಾಗಲಿ ಸಮಾನವಾಗಿ ನಿಗ್ರಹಿಸಿ, ಚಕ್ರವರ್ತಿ ಪದವಿಯಿಂದ ಅಖಂಡ ಪ್ರಜಾಕೋಟಿಗಾಗಿ ಸಮಯ ಬಂದಾಗ ತಮ್ಮ ಪ್ರಾಣವನ್ನೂ ಕೊಡಲು ಸಿದ್ಧವಾಗಿ ಪ್ರಜಾಪಾಲನೆ ಮಾಡುತ್ತಿದ್ದರು. (ಆಯ್ದಭಾಗ)

About the Author

ತ.ರಾ.ಸು. (ತ.ರಾ. ಸುಬ್ಬರಾವ್)
(12 June 1906 - 10 April 1984)

ತಳುಕು ರಾಮಸ್ವಾಮಯ್ಯ ಸುಬ್ಬರಾಯ(ತ.ರಾ.ಸು) ಹುಟ್ಟಿದ್ದು 1906 ಜೂನ್ 12 ಚಿತ್ರದುರ್ಗ ಜಿಲ್ಲೆಯ ಚೆಳ್ಳೆಕೆರೆ ತಾಲ್ಲೂಕಿನ ತಳುಕು ಎಂಬ ಗ್ರಾಮದಲ್ಲಿ. ಮೂಲ ಆಂಧ್ರಪ್ರದೇಶದವರು. ತಂದೆ ರಾಮಸ್ವಾಮಯ್ಯ ಅವರು ತಳುಕು ಗ್ರಾಮಕ್ಕೆ ಬಂದು ನಂತರ ಚಿತ್ರದುರ್ಗದಲ್ಲಿ ಪ್ಲೀಡರ್ ಆಗಿದ್ದರು. ಸುಬ್ಬಾರಾಯರು ಇಂಟರ್ ಮೀಡಿಯೆಟ್ನಲ್ಲಿದ್ದಾಗ ದೇಶದ ಸ್ವಾತಂತ್ಯ್ರ ಚಳವಳಿಯಲ್ಲಿ ಧುಮುಕಿದರು. ಪ್ರಮುಖ ಕೃತಿಗಳು: ಕಂಬನಿಯ ಕುಯಿಲು, ರಕ್ತರಾತ್ರಿ, ದುರ್ಗಾಸ್ತಮಾನ, ನೃಪತುಂಗ, ಸಿಡಿಲ ಮೊಗ್ಗು, ಶಿಲ್ಪಶ್ರೀ, ಕಸ್ತೂರಿ ಕಂಕಣ, ತಿರುಗುಬಾಣ-, ಈ ಕಾದಂಬರಿಗಳು ಬರೆಹಾ ಕೌಶಲ್ಯಕ್ಕೆ ಹಿಡಿದ ಕನ್ನಡಿ. ಚಲನಚಿತ್ರವಾದ ಕಾದಂಬರಿಗಳು: ಚಂದವಳ್ಳಿಯ ತೋಟ, ಹಂಸಗೀತೆ (1956ರಲ್ಲಿ ಬಸಂತ ಬಹಾರ್ ಹೆಸರಲ್ಲಿ ಹಿಂದಿ ಚಲನಚಿತ್ರವಾಗಿತ್ತು.) ನಾಗರಹಾವು, ...

READ MORE

Related Books