ನೂರು ಮರ ನೂರು ಸ್ವರ ಒಂದೊಂದು ಅತಿಮಧುರ

Author : ದ.ರಾ. ಬೇಂದ್ರೆ (ಅಂಬಿಕಾತನಯದತ್ತ)

Pages 232

₹ 120.00




Year of Publication: 2015
Published by: ಕನ್ನಡ ಸಾಹಿತ್ಯ ಪರಿಷತ್ತು

Synopsys

ಬೇಂದ್ರೆಯವರ ಆಯ್ದ ಕವಿತೆಗಳ ಸಂಗ್ರಹವಿದು. ಬೇಂದ್ರೆಯವರ ನಿಧನಾ ನಂತರ ಅವರ ಬಹುತೇಕ ಸಂಕಲನಗಳನ್ನು ಶ್ರೀಮಾತಾ ಪ್ರಕಾಶನದಿಂದ ವಾಮನ ಬೇಂದ್ರೆಯವರು ಮರುಮುದ್ರಣ ಮಾಡುತ್ತ ಬಂದಿದ್ದರು. ಗ್ರಂಥಸ್ವಾಮ್ಯದ ಕಾರಣದಿಂದಾಗಿ ಬೇಂದ್ರೆಯವರ ಕವಿತೆಗಳು ಬೇರೆ ಕಡೆಗೆ ಪ್ರಕಟವಾದದ್ದು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ. ಪುಂಡಲೀ ಹಾಲಂಬಿ ಅವರು ಅಧ್ಯಕ್ಷರಾಗಿದ್ದ ಸಮಯದಲ್ಲಿ ಅವರ ಒತ್ತಾಸೆಯ ಮೇರೆಗೆ ವಾಮನ ಬೇಂದ್ರೆಯವರು ಬೇಂದ್ರೆಯವರ ಆಯ್ದ ಅತ್ಯುತ್ತಮ ಕವಿತೆಗಳನ್ನು ಈ ಸಂಗ್ರಹದಲ್ಲಿ ನೀಡಿದ್ದಾರೆ. ಇದು ಬೇಂದ್ರೆಯವರ ಪ್ರಾತಿನಿಧಿಕ ಕವಿತೆಗಳ ಸಂಕಲನ. ಮುದ್ರಣ-ಮುಖಪುಟ ಸೊಗಸಾಗಿವೆ.

About the Author

ದ.ರಾ. ಬೇಂದ್ರೆ (ಅಂಬಿಕಾತನಯದತ್ತ)
(31 January 1896 - 26 October 1981)

ಕನ್ನಡ ಕಾವ್ಯದ ಸೊಬಗು-ಸೊಗಸು ಹೆಚ್ಚಿಸಿದ ‘ಅಂಬಿಕಾತನಯದತ್ತ’ ಕಾವ್ಯನಾಮದ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರನ್ನು ‘ವರಕವಿ’, ‘ಗಾರುಡಿಗ’ ಎಂದು ಗುರುತಿಸಲಾಗುತ್ತದೆ. ತಂದೆ ರಾಮಚಂದ್ರ ತಾಯಿ ಅಂಬವ್ವ. ಧಾರವಾಡದಲ್ಲಿ 1896ರ ಜನವರಿ 31ರಂದು ಜನಿಸಿದರು. ಧಾರವಾಡದಲ್ಲಿ ಮೆಟ್ರಿಕ್ (1913) ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಬಿ.ಎ. (1918) ಪದವಿ ಪಡೆದರು. ಕೆಲವು ಕಾಲ ಅಧ್ಯಾಪಕ ವೃತ್ತಿ ಮಾಡಿದ ಮೇಲೆ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. (1935) ಪದವಿ ಪೂರ್ಣಗೊಳಿಸಿದರು. ಗದುಗಿನ ವಿದ್ಯಾದಾನ ಸಮಿತಿ ಪ್ರೌಢಶಾಲೆಯಲ್ಲಿ ಹೆಡ್ ಮಾಸ್ಟರ್ ಆಗಿ ವೃತ್ತಿ ಆರಂಭಿಸಿದ ಅವರು ನಂತರ ಹುಬ್ಬಳ್ಳಿಯ ನ್ಯೂ ...

READ MORE

Related Books