ಒಣ ಬೇಸಾಯ

Author : ಎ.ಎಸ್. ಕುಮಾರಸ್ವಾಮಿ

Pages 74

₹ 10.00




Year of Publication: 1994
Published by: ಕನ್ನಡ ಸಾಹಿತ್ಯ ಪರಿಷತ್ತು
Address: ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು
Phone: 08026623584

Synopsys

ಒಣ ಬೇಸಾಯ ಕೃತಿಯು ಒಣ ಬೇಸಾಯದ ಪರಿಚಯ, ರಾಜ್ಯದ ಒಣಬೇಸಾಯ ಪ್ರದೇಶಗಳ ಬಗ್ಗೆ ಮಾಹಿತಿ, ಮಳೆ-ಮಣ್ಣು-ನೀರು-ಸಸ್ಯ-ವಾತಾವರಣಗಳ ನಡುವಿನ ಸಂಬಂಧಗಳು, ವೈಜ್ಞಾನಿಕ ಒಣಬೇಸಾಯ ಪದ್ಧತಿಗಳ ಬಗ್ಗೆ ಮಾಹಿತಿಯನ್ನು ಒದಗಿಸುತ್ತವೆ. ಒಣ ಭೂಮಿಯಲ್ಲಿ ಬೇಸಾಯ ಮಾಡುವ ಮೊದಲು ಅಲ್ಲಿಗೆ ಹೊಂದಿಕೊಳ್ಳುವ ಬೆಳೆಗಳು, ಬೇಸಾಯ ಕ್ರಮ ಮುಂತಾದ ವಿಷಯಗಳನ್ನು ತಿಳಿದುಕೊಳ್ಳಲು ಈ ಕೃತಿಯು ಕೈಪಿಡಿಯಾಗಿದೆ. 

About the Author

ಎ.ಎಸ್. ಕುಮಾರಸ್ವಾಮಿ
(20 January 1953)

ಲೇಖಕ, ಕೃಷಿ ವಿಜ್ಞಾನಿ ಡಾ.ಎ.ಎಸ್. ಕುಮಾರಸ್ವಾಮಿ (ಅಬ್ಬಿಗೆರೆ ಶಿವಲಿಂಗಪ್ಪ ಕುಮಾರಸ್ವಾಮಿ) ಜನಿಸಿದ್ದು 1953 ಜನವರಿ 20 ರಂದು. ದಾವಣಗೆರೆ ಜಿಲ್ಲೆ ದೊಡ್ಡಬ್ಬೀಗೆರೆ ಗ್ರಾಮದವರು. ಸಂತೇಬೆನ್ನೂರಿನಲ್ಲಿ ಎಸ್‌ಎಸ್‌ಎಲ್‌ಸಿ ವರೆಗೂ ಶಿಕ್ಷಣ ಪಡೆದು, ಧಾರವಾಡ ಹಾಗೂ ಬೆಂಗಳೂರಿನಲ್ಲಿ ಕೃಷಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪಡೆದಿದ್ದಾರೆ. ಬೆಂಗಳೂರಿನ ಕೃಷಿ ಮಹಾವಿದ್ಯಾಲಯದಲ್ಲಿ ಶಿಕ್ಷಕರಾಗಿ ವೃತ್ತಿ ಆರಂಭಿಸಿ, ಪ್ರಾಧ್ಯಾಪಕರಾಗಿ, ವಲಯ ಕೃಷಿ ಸಂಶೋಧನ ಕೇಂದ್ರದಲ್ಲಿ ತಂಬಾಕು ಬೆಳೆ ಬೇಸಾಯ ಶಾಸ್ತ್ರಜ್ಞರಾಗಿ, ಹಾಸನ ಕೃಷಿ ಕಾಲೇಜು ಸ್ಥಾಪಕ ನಿರ್ದೇಶಕರು ಹಾಗೂ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಹ ಸಂಶೋಧನಾ ನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ತಮ್ಮ ಅನುಭವ, ...

READ MORE

Related Books