ಒಂದು ಜೀವನ ಸಾಲದು

Author : ಪೂರ್ಣಿಮಾ ಆರ್.

Pages 592

₹ 446.00




Year of Publication: 2018
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 0802220358001

Synopsys

ಖ್ಯಾತ ಪತ್ರಕರ್ತ, ಚಿಂತಕ ಹಾಗೂ ರಾjಕೀಯ ವಿಶ್ಲೇಷಕ ಕುಲದೀಪ ನಯ್ಯರ್ ಅವರ ಆತ್ಮಕಥೆ ಮೂಲ ಇಂಗ್ಲಿಷ್ ನಲ್ಲಿದ್ದು, ಅದನ್ನು ಆರ್. ಪೂರ್ಣಿಮಾ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. 1992ರಲ್ಲಿ ರಾಜ್ಯಸಭೆ ಸದಸ್ಯರಾಗಿ ನೇಮಕಗೊಂಡಿದ್ದರು. ಎಡಪಂಥೀಯ ವಿಚಾರಧಾರೆಯ ಕುಲದೀಪ ನಯ್ಯರ್ ಉರ್ದು ಪತ್ರಿಕೆಯ ವರದಿಗಾರರಾಗಿ ಪ್ರತಿಕಾ ಕ್ಷೇತ್ರ ಪ್ರವೇಶಿಸಿದರು. ದೇಶದ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜೈಲು ವಾಸ ಅನುಭವಿಸಿದರು. ಸಂಯುಕ್ತ ರಾಷ್ಟ್ರ ಸಂಸ್ಥೆಯಲ್ಲಿ ಭಾರತದ ನಿಯೋಗದ ಸದಸ್ಯರಾಗಿದ್ದರು. ಖ್ಯಾತ ಅಂಕಣಕಾರರು ಆಗಿದ್ದರು. 2000 ರಿಂದ ಪ್ರತಿವರ್ಷ ಅವರು ಪಾಕಿಸ್ತಾನ ಮತ್ತು ಭಾರತಗಳ ಸ್ವಾತಂತ್ರ್ಯದಿನಗಳಂದು (14 ಮತ್ತು 15 ಆಗಸ್ಟ್) ಅಮೃತಸರ ಸಮೀಪದ ವಾಘಾ ಗಡಿಯಲ್ಲಿ ಮೊಂಬತ್ತಿ ಬೆಳಗಿಸುವ ಕೆಲಸಕ್ಕೆ ಶಾಂತಿವಾದಿ ಕಾರ್ಯಕರ್ತರ ನೇತೃತ್ವ ವಹಿಸುತ್ತಿದ್ದರು. 23ಆಗಸ್ಟ್ 2018ರಂದು ದೆಹಲಿಯ ತಮ್ಮ ಮನೆಯಲ್ಲಿ (95 ವಯಸ್ಸು) ನಿಧನರಾದರು.

ಕೃತಿಯ ಶ್ರೇಷ್ಠ ಅನುವಾದಕ್ಕಾಗಿ ಕರ್ನಾಟಕ ಲೇಖಕಿಯರ ಸಂಘದ ‘ಎಚ್.ವಿ.ಸಾವಿತ್ರಮ್ಮ ಪ್ರಶಸ್ತಿ’( 2013), ಶ್ರೇಷ್ಠ ಅನುವಾದಕ್ಕಾಗಿ ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಪ್ರಶಸ್ತಿ -2013 ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ (2015) ಲಭಿಸಿವೆ.

About the Author

ಪೂರ್ಣಿಮಾ ಆರ್.
(16 June 1954)

ಡಾ ಆರ್. ಪೂರ್ಣಿಮಾ ಅವರು ಕನ್ನಡ ಪತ್ರಿಕೋದ್ಯಮದಲ್ಲಿ ಕಳೆದ 35 ವರ್ಷಗಳಿಂದ ಕ್ರಿಯಾಶೀಲವಾಗಿರುವ ಪ್ರತಿಭಾವಂತ ಪತ್ರಕರ್ತೆ ಮತ್ತು ಅಂಕಣಗಾರ್ತಿ. ಕನ್ನಡ ಸಾಹಿತ್ಯದಲ್ಲಿ ಎಂ.ಎ ಪದವಿಯಲ್ಲಿ ಪ್ರಥಮ ರ್‍ಯಾಂಕ್ ಮತ್ತು ಸುವರ್ಣ ಪದಕಗಳ ಮನ್ನಣೆ ಗಳಿಸಿದವರು. ಜನಪರ ಚಳವಳಿಗಳ ಸಾಂಗತ್ಯದಲ್ಲಿ ರೂಪುಗೊಂಡ ವ್ಯಕ್ತಿತ್ವ.ಉದಯವಾಣಿ ಬೆಂಗಳೂರು ಆವೃತ್ತಿಯ ಸಂಪಾದಕ ಸ್ಥಾನದ ಜವಬ್ದಾರಿ ನಿರ್ವಹಿಸಿದ ಪ್ರಥಮ ಮಹಿಳೆ ಎಂಬ ದಾಖಲೆಯನ್ನು ಪಡೆದುಕೊಂಡವರು. ವಿವಿಧ ಕ್ಷೇತ್ರಗಳನ್ನು ಕುರಿತು ಬರೆಯಬಲ್ಲ ಅಧ್ಯಯನಶೀಲ, ವಿಶ್ಲೇಷಣಾತ್ಮಕ ಪ್ರವೃತ್ತಿ, ಪತ್ರಿಕೋದ್ಯಮದ ಸಾಧನೆಗೆ ಹಲವಾರು ಪ್ರತಿಷ್ಠಿತ ಪ್ರಶಸ್ತಿ,ಪುರಸ್ಕಾರಗಳು ಇವರಿಗೆ ಲಭಿಸಿವೆ.  ಪೂರ್ಣಿಮಾ ಆರ್. ಅವರು ಲೇಖಕಿಯಾಗಿಯೂ ಜನಪ್ರಿಯ. ಸ್ನೇಹಸೇತು, ಚಿತ್ತಗಾಂಗ್ ...

READ MORE

Related Books