ಪಂಪ ಭಾರತ ಓದು

Author : ಸಿ.ಪಿ. ನಾಗರಾಜ

Pages 134

₹ 140.00




Year of Publication: 2021
Published by: ನಾಗು ಸ್ಮಾರಕ ಪ್ರಕಾಶನ
Address: 75, ‘ಎ’ ಬ್ಲಾಕ್, 5ನೆ ಕ್ರಾಸ್,ಕ್ರಿಷ್ಣ ಗಾರ್ಡನ್, ಆರ್.ವಿ.ಕಾಲೇಜು ಪೋಸ್ಟ್, ಬೆಂಗಳೂರು- 560 059
Phone: 9986347521

Synopsys

ಸಿ.ಪಿ.ನಾಗರಾಜ ಅವರ ಪಂಪ ಭಾರತ ಓದು ನಾಟಕ ರೂಪದಲ್ಲಿ ಪ್ರಕಟವಾಗಿರುವ ಕೃತಿ. ‘ಪಂಪ ಭಾರತ ಓದು’ ಎಂಬ ಶೀರ್ಷಿಕೆಯಡಿಯಲ್ಲಿ ಮತ್ಸ್ಯಗಂಧಿ ಪ್ರಸಂಗ, ಅಂಬೆ ಪ್ರಸಂಗ, ಧೃತರಾಷ್ಟ್ರ ಪಾಂಡು ವಿದುರ ಜನನ, ಕರ್ಣನ ಜನನ, ಕರ್ಣನ ಬೆಳವಣಿಗೆ, ಶಾಪಕ್ಕೆ ಗುರಿಯಾದ ಪಾಂಡುರಾಜ, ಕುಂತಿಯ ಬಯಕೆ, ಗಾಂಧಾರಿಯ ಆತಂಕ ಎಂಬ ಎಂಟು ಪ್ರಸಂಗಗಳನ್ನು ನಾಟಕ ರೂಪದಲ್ಲಿ ಜೋಡಿಸಿದ್ದಾರೆ.

ಪ್ರತಿಯೊಂದು ಪ್ರಸಂಗದಲ್ಲಿಯೂ ಪಂಪ ಭಾರತ ಪಠ್ಯದ ನಾಟಕ ರೂಪ, ಪದ ವಿಂಗಡಣೆ ಮತ್ತು ತಿರುಳು, ಪಂಪ ಭಾರತ ಪಠ್ಯ ಎಂಬ ಮೂರು ಭಾಗಗಳಿವೆ. ವಿಮರ್ಶಕ ಎಚ್.ದಂಡಪ್ಪ ಈ ಕೃತಿಗೆ ಮುನ್ನುಡಿ ಬರೆದಿದ್ದಾರೆ. ಹಳೆಗನ್ನಡ ಕಾವ್ಯಗಳನ್ನು ಜನರಿಗೆ ತಲುಪಿಸಲೆಂದು ಮಹಾಕವಿ ರನ್ನನ ಗದಾಯುದ್ಧ ಕಾವ್ಯವನ್ನು ನಾಟಕ ರೂಪದಲ್ಲಿ ಅಳವಡಿಸಿದ ಬಿ.ಎಂಶ್ರೀ ಅವರಿಂದ ಮೊದಲುಗೊಂಡು ನಮ್ಮ ಕನ್ನಡ ಲೇಖಕರು ಅನೇಕ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸುತ್ತಲೇ ಇದ್ದಾರೆ. ಈ ಹಾದಿಯಲ್ಲಿ ಸಿ.ಪಿ ನಾಗರಾಜ ಅವರು ‘ಪಂಪ ಭಾರತ ಓದು’ ಕೃತಿಯ ಮೂಲಕ ಒಂದು ಹೆಜ್ಜೆಯನ್ನು ಇಟ್ಟಿದ್ದಾರೆ ಎಂಬುದಾಗಿ ಪ್ರಶಂಸೆಯ ನುಡಿಗಳನ್ನಾಡಿದ್ದಾರೆ.

About the Author

ಸಿ.ಪಿ. ನಾಗರಾಜ

ಬರಹಗಾರ ಸಿ.ಪಿ ನಾಗರಾಜು ಅವರು 1945ರಲ್ಲಿ ಪುಟ್ಟೇಗೌಡ-ಲಕ್ಷ್ಮೀ ದೇವಮ್ಮ ದಂಪತಿಯ ಮಗನಾಗಿ ಜನಿಸಿದರು. ಎಂ.ಎ, ಪಿಎಚ್.ಡಿ ವ್ಯಾಸಂಗ ಮಾಡಿ ಸ್ತುತ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುದ್ರಿತ ನಾಟಕ ಕೃತಿಗಳು: ಭಾಗೀರಥಿ, ಅಂಬೆ, ಹಾವು, ಅಂಗಿಬಟ್ಟೆ, ಒಂದು ರೂಪಾಯಿ, ಕಳ್ಳರಿದ್ದಾರೆ ಎಚ್ಚರಿಕೆ, ಹೆಣದ ಹಣ, ಮೂರು ಸಾಮಾಜಿಕ ನಾಟಕಗಳು. ಮುದ್ರಿತ ಗದ್ಯ ಕೃತಿಗಳು: ಕರಿಯನ ಪುರಾಣ, ಕನಕನ ಅವ್ವ, ಹಳ್ಳಿಗಾಡಿನ ರೂವಾರಿ, ಡಾ.ಬಂದೀಗೌಡ, ಆಣೆ ಪ್ರಮಾಣಗಳು, ಬಯ್ಗುಳ, ಸರ್ವಜ್ಞ ವಚನಗಳ ಓದು, ಅಲ್ಲಮ ವಚನಗಳ ಓದು, ಶಿವಶರಣೆಯರ ವಚನಗಳ ಓದು, ಶಿವಶರಣರ ವಚನಗಳ ಓದು, ಬಸವಣ್ಣನ ...

READ MORE

Conversation

Related Books