ಪಂಜೆ ಮಂಗೇಶರಾಯರ ಮಕ್ಕಳ ಪದ್ಯಗಳು

Author : ಪಂಜೆ ಮಂಗೇಶರಾಯ

Pages 48

₹ 45.00




Year of Publication: 2015
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ ಬಸವನಗುಡಿ, ಬೆಂಗಳೂರು - 560 004
Phone: 080-26617100

Synopsys

ನಾಗರ ಹಾವೇ ಹಾವೊಳು ಹೂವೆ..ಬಾಗಿಲ ಬಿಲದಲ್ಲಿ ನಿನ್ನಯ ಠಾವೆ....! ಹೀಗೆ ಮಕ್ಕಳ ಮನಸ್ಸು ಖುಷಿ ಪಡುವ ರೀತಿಯಲ್ಲಿ, ಆಕರ್ಷಕವಾಗಿ ಪದ್ಯಗಳನ್ನು ಬರೆದ ಪಂಜೆ ಮಂಗೇಶರಾಯರು, ಮಕ್ಕಳ ಸಾಹಿತ್ಯ ವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ‘ನಾಗರ ಹಾವೆ ಹಾವೊಳು ಹುವೆ...’ ಇಂತಹ ಹತ್ತು ಹಲವು ಕವನಗಳ ಮೂಲಕ ಪಂಜೆ ಮಂಗೇಶರಾಯರು ಜನಮಾನಸದಲ್ಲಿ ಅಜರಾಮರವಾಗಿದ್ದಾರೆ. ಮಕ್ಕಳ ಸಾಹಿತ್ಯ ರಚನೆಯಲ್ಲಿ ಇರುವ ಶ್ರಮ-ಅಧ್ಯಯನದ ಆಳ-ವಿಸ್ತಾರಗಳನ್ನು ತಿಳಿಯಲು ಸಹ ಈ ಕೃತಿ ಉತ್ತಮ ಆಕರ ಗ್ರಂಥವಾಗಿದೆ.

About the Author

ಪಂಜೆ ಮಂಗೇಶರಾಯ
(22 February 1874)

ಪಂಜೆ ಮಂಗೇಶರಾಯರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ 1874 ಫೆಬ್ರುವರಿ 22 ರಂದು ಜನಿಸಿದರು. ತಾಯಿ ಸೀತಮ್ಮ. ತಂದೆ ರಾಮಪಯ್ಯ.  ಬಂಟ್ವಾಳದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮಂಗಳೂರಿನಲ್ಲಿ ಇಂಟರ್‌ ಮೀಡಿಯೇಟ್‌ ಶಿಕ್ಷಣ ಪಡೆದರು. ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದರು. ಹರಟೇಮಲ್ಲ, ರಾಮಪಂ, ಕವಿಶಿಷ್ಯ ಮುಂತಾದ ಹೆಸರುಗಳಲ್ಲಿ ಬರಹಗಳನ್ನು ರಚಿಸಿದ್ದರು. ಇವರು ಬರೆದ ಹುತ್ತರಿ ಹಾಡು ಕೊಡಗಿನ ನಾಡಗೀತೆಯಾಯಿತು.  ಮಕ್ಕಳ ಸಾಹಿತ್ಯಕ್ಕೆ ಹೆಚ್ಚು ಪ್ರಾಶಸ್ತ್ಯ ಕೊಡುತ್ತಿದ್ದ ಇವರು ಬಾಲ ಸಾಹಿತ್ಯಮಂಡಲ ಸಂಸ್ಥೆಯನ್ನು ರಚಿಸಿ ಬಾಲಸಾಹಿತ್ಯ ಪ್ರಕಟಣೆಯಲ್ಲಿ ತೊಡಗಿದರು. ಮಂಗೇಶರಾಯರ ಪ್ರಮುಖ ಕೃತಿಗಳೆಂದರೆ ಪಂಚಕಜ್ಜಾಯ, ತೂಗುವ ತೊಟ್ಟಿಲು, ...

READ MORE

Related Books