‘ಪರಿಧಿ’ ಕನ್ನಡದ ಬಹುಮುಖ್ಯ ಲೇಖಕರಲ್ಲಿ ಒಬ್ಬರಾದ ಕೆ.ಟಿ. ಗಟ್ಟಿ ಅವರ ಕಾದಂಬರಿ. ದಿಗಂಬರ ಎಂಬ ವ್ಯಕ್ತಿಯ ಮೂಲಕ ಇಡೀ ಕತೆಯನ್ನು ಕಟ್ಟಿಕೊಡುವ ಲೇಕರು, ಮನುಷ್ಯತ್ವದ ಹುಡುಕಾಟವನ್ನೇ ಸಾಹಿತ್ಯಾತ್ಮಕ ಭಾಷೆಯಲ್ಲಿ ದಾಖಲಿಸಿದ್ದಾರೆ. ವಿಕ್ಷಿಪ್ತ ವ್ಯಕ್ತಿತ್ವದ ವ್ಯಕ್ತಿಯೊಬ್ಬ ಬದುಕಿನ ಮೋಹದತ್ತ ನಿರ್ಲಿಪ್ತನಾದರೂ ಸಮಾಜದ ಸರಿ-ತಪ್ಪುಗಳಿಗೆ ವಿಮುಕ್ತನಾಗದೇ ಮನುಷ್ಯತ್ವದ ಹುಡುಕಾಟದಲ್ಲಿ ತೊಡಗುವುದೇ ಕಾದಂಬರಿಯ ಕತಾವಸ್ತು. ಇಡೀ ಕಾದಂಬರಿ ತನ್ನ ವಿಭಿನ್ನ ಶೈಲಿಯಿಂದಲೇ ಓದುಗರನ್ನು ಹಿಡಿದಿಡುತ್ತದೆ.
ಕಾದಂಬರಿಕಾರ, ಭಾಷಾತಜ್ಞ, ಸಮರ್ಥ ಪ್ರಾಧ್ಯಾಪಕರೆನಿಸಿದ ಕೆ.ಟಿ. ಗಟ್ಟಿಯವರು ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದರು. ತಂದೆ ಧೂಮಪ್ಪಗಟ್ಟಿಯವರು ಕೃಷಿಕರಾದರೂ ಯಕ್ಷಗಾನ ಕಲೆಯ ಬಗ್ಗೆ ಅಪಾರ ಒಲವಿದ್ದವರು. ತಾಯಿ ಪರಮೇಶ್ವರಿ ತುಳು-ಮಲಯಾಳಂ ಪಾಡ್ದನ ಹಾಡುಗಳನ್ನು ಕಲಿತವರು. ಉತ್ತಮ ಭಾಷೆ, ಆಕರ್ಷಕ ಶೈಲಿ, ಹೊಸ ಹೊಸ ವಸ್ತು, ಸರಳ ನಿರೂಪಣೆಗಳ ಮೂಲಕ ಕನ್ನಡ ಸಾರಸ್ವತ ಲೋಕದಲ್ಲಿ ಮನೆ ಮಾತಾದ ಹಿರಿಯ ಕಥೆಗಾರ ಕೆ.ಟಿ.ಗಟ್ಟಿ ಅವರು ಎಲ್ಲಾ ಓದುಗರಿಗೆ ಚಿರಪರಿಚಿತರು. ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿಎಡ್ ಪದವಿ ಪಡೆದಿರುವ ಕೆ.ಟಿ.ಗಟ್ಟಿ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯವರು. ಜನಿಸಿದ್ದು 1938ರಲ್ಲಿ. ಸದ್ಯ ...
READ MORE