ಪರೀಕ್ಷಾ ಭಯ ಬೇಡ!

Author : ನಾ. ಸೋಮೇಶ್ವರ

Pages 118

₹ 100.00




Year of Publication: 2014
Published by: ಷಡಕ್ಷರಿಸ್ವಾಮಿ ಡಿಗ್ಗಾಂವಕರ ಪ್ರಕಾಶನ

Synopsys

ಪರೀಕ್ಷೆ ಹತ್ತಿರವಾಗುತ್ತಿದ್ದಂತೆ ಮಕ್ಕಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಭಯ, ಆತಂಕಗಳು ಶುರುವಾಗುತ್ತವೆ. ಅದರಲ್ಲೂ ಗ್ರಾಮೀಣ ವಿದ್ಯಾರ್ಥಿಗಳು ಒಂದು ರೀತಿಯ ಕೀಳರಿಮೆ ಕಾಡುತ್ತದೆ. ಅಂತಹ ಮಕ್ಕಳು ಪರೀಕ್ಷೆ ಎದುರಿಸುವುದು ಹೇಗೆ?, ತಾನು ಬುದ್ಧಿವಂತ ವಿದ್ಯಾರ್ಥಿಗಳೊಡನೆ ಹೇಗೆ ಸ್ಪರ್ಧಿಸಬೇಕು? ಎಂಬ ಪ್ರಶ್ನಾಂತಕಗಳ ಕುರಿತು ಲೇಖಕ ನಾ. ಸೋಮೇಶ್ವರ ಅವರು ಇಲ್ಲಿ ಸವಿವರವಾಗಿ ಚರ್ಚಿಸಿದ್ದಾರೆ.

About the Author

ನಾ. ಸೋಮೇಶ್ವರ
(14 May 1955)

ನಾ. ಸೋಮೇಶ್ವರ  ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು.  ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ  ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ,  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...

READ MORE

Related Books