ಪರಿಸರ ಗೆಳೆಯ ಮುರಾರಿ

Author : ಜಯಪ್ರಕಾಶ ಮಾವಿನಕುಳಿ

Pages 132

₹ 60.00




Year of Publication: 2005
Published by: ಡಾ. ಎನ್. ಮುರಾರಿ ಬಲ್ಲಾಳ ಪ್ರತಿಷ್ಠಾನ
Address: ರಥಬೀದಿ, ಉಡುಪಿ
Phone: 9448725066

Synopsys

‘ಪರಿಸರ ಗೆಳೆಯ ಮುರಾರಿ’ ಲೇಖಕ ಜಯಪ್ರಕಾಶ ಮಾವಿನಕುಳಿ ಅವರು ಸಂಪಾದಿಸಿರುವ ಮುರಾರಿ ಬಲ್ಲಾಳರ ಲೇಖನಗಳ ಸಂಕಲನ. ಇಲ್ಲಿ ಅಕ್ಕರೆಯ ಮಾತು- ಸ್ಯಾಮ್ ದೊಂಗ್ ರಿಮ್ ಪೋಚೆ, ಮಧುರಸ್ಮೃತಿ- ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಆಧ್ಯಾತ್ಮ ನಿಲುವಿನ ಸಮಾಜವಾದಿ ಚಿಂತಕ- ಡಾ.ಯು.ಆರ್. ಅನಂತಮೂರ್ತಿ ಸೇರಿದಂತೆ ಹಲವು ಮಹತ್ವದ ಲೇಖನಗಳು ಸಂಕಲನಗೊಂಡಿವೆ.

About the Author

ಜಯಪ್ರಕಾಶ ಮಾವಿನಕುಳಿ
(05 May 1951)

ಸಾಹಿತಿ ಜಯಪ್ರಕಾಶ ಮಾವಿನಕುಳಿ ಅವರು ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯಿಕ ಕೃಷಿಯ ಜೊತೆಗೆ ನಾಟಕಕಾರರಾಗಿ, ರಂಗ ನಿರ್ದೇಶಕರಾಗಿ ಮತ್ತು ರಂಗಭೂಮಿ ಚಲನಚಿತ್ರ ನಟರಾಗಿಯೂ ಖ್ಯಾತಿ ಗಳಿಸಿದ್ದಾರೆ. ಕನ್ನಡ ಸಾಹಿತ್ಯಲೋಕಕ್ಕೆ ಹಲವು ನಾಟಕಗಳು, ಕಾದಂಬರಿ, ಸಣ್ಣಕತೆಗಳು, ಕಾವ್ಯ ಮತ್ತು ಇತರರೊಡನೆ ಹಲವು ಕೃತಿಗಳ ಸಂಪಾದನೆ ಸೇರಿದಂತೆ ಸುಮಾರು ಎಪ್ಪತ್ತು ಪುಸ್ತಕಗಳನ್ನು ನೀಡಿದ್ದಾರೆ. 1978ರಿಂದಲೂ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದು 4 ಕಥಾ ಸಂಕಲನಗಳು, 4 ಕವನ ಸಂಕಲನಗಳು, 7 ನಾಟಕಗಳು, 12 ಸಂಪಾದಿತ ಕೃತಿಗಳು ಹಾಗೂ ಇತರ ಕೃತಿಗಳೊಂದಿಗೆ 60ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ. 'ಪೊಲಿಟಿಕ್ಸ್ ಆ್ಯಂಡ್ ಕಲ್ಚರ್' ಪ್ರೌಢ ಪ್ರಬಂಧಕ್ಕೆ ಡಾಕ್ಟರೇಟ್ ಪಡೆದಿದ್ದಾರೆ. ...

READ MORE

Related Books