ಪರ್ವತಾರಣ್ಯ

Author : ಸಿ.ಎಂ.ಗೋವಿಂದರೆಡ್ಡಿ

Pages 184

₹ 185.00




Year of Publication: 2018
Published by: ಮಹಿಮಾ ಪ್ರಕಾಶನ
Address: ಮಹಿಮಾ ಪ್ರಕಾಶನ, ನಂ. ೧೩೯೩/೨, ಸಿ.ಹೆಚ್.-೩೧, ೬ನೇ ಕ್ರಾಸ್, ಕೃಷ್ಣಮೂರ್ತಿಪುರಂ , ಮೈಸೂರು - ೫೭೦೦೦೪
Phone: 9448759815

Synopsys

‘ಪರ್ವತಾರಣ್ಯ’ ಮಕ್ಕಳಿಗಾಗಿ ರಚಿಸಿದ ಮಹಾಭಾರತದ ಎರಡನೆಯ ಭಾಗ. ಈ ಭಾಗದಲ್ಲಿ ಕಥನವು ಪಾಂಡವರ ವನವಾಸದಿಂದ ಪ್ರಾರಂಭವಾಗಿ, ಯುದ್ಧ ನಿಶ್ಚಯವಾಗುವವರೆಗೆ ಹರಡಿಕೊಂಡಿದೆ. ದ್ವಿಪದಿಯಲ್ಲಿರುವ ಈ ಕಾವ್ಯದ ಸರಳ ಭಾಷೆ ಈವತ್ತಿನ ಆಡುನುಡಿಗೆ ಹತ್ತಿರದ್ದು. ಹಾಗಾಗಿ ಮಹಾಭಾರತ ಈವತ್ತಿನ ಕಥೆಯಾಗಿ ಭಾಷಿಕವಾಗಿಯೂ ತನ್ನನ್ನು ತೋರಿಸಿಕೊಳ್ಳುವುದು. ನಿಷ್ಠುರವಾದ ಜೀವನಪರ ನಿಲುವು ಕಥನದ ಉದ್ದಕ್ಕೂ ಕಂಡುಬರುವುದು. ಸಮಾಜಮುಖತೆ, ಶೋಷಿತ ವರ್ಗದ ಪರವಾದ ನಿಲುವು ಭಾರತ ಕಥೆಗೆ ಒಂದು ಹೊಸ ಪರಿವೇಷವನ್ನೇ ನೀಡಿವೆ. ಮಕ್ಕಳಿಗಾಗಿ ತಾನು ಭಾರತವನ್ನು ಪುನಾರಚಿಸುತ್ತಿರುವೆನು ಎಂಬ ಸ್ಪಷ್ಟ ನಿಲುವಿನಿಂದಲೇ ಕವಿಯು ಹೊರಟಿರುವುದರಿಂದ ಸರಳತೆ, ಸ್ಪಷ್ಟತೆ, ಸಂಕ್ಷಿಪ್ತತೆಯ ಮಾರ್ಗವನ್ನು ಅವರು ಅನುಸರಿಸುತ್ತಾರೆ. ಸಹಜಧರ್ಮದಲ್ಲಿ ಸಲೀಸಾಗಿ ಸಾಗುವ ಮನೋಹರವಾದ ಕಥನವು ಮಕ್ಕಳಿಗೆ ಮಾತ್ರವಲ್ಲ ಭಾರತ ಕಥೆಯಲ್ಲಿ ಆಸಕ್ತಿಯುಳ್ಳ ಹಿರಿಯರಿಗೂ ಪ್ರಿಯವಾಗುವುದರಲ್ಲಿ ಸಂಶಯವಿಲ್ಲ.

About the Author

ಸಿ.ಎಂ.ಗೋವಿಂದರೆಡ್ಡಿ
(11 August 1958)

ಮಕ್ಕಳ ಸಾಹಿತಿ ಎಂದು ಹೆಸರಾಗಿರುವ ಡಾ.ಸಿ.ಎಂ.ಗೋವಿಂದರೆಡ್ಡಿಯವರು ಮಕ್ಕಳ ಸಾಹಿತ್ಯದ ಜೊತೆಗೆ ಇತರೆ ಸಾಹಿತ್ಯದಲ್ಲೂ ಕೃತಿಗಳನ್ನು ರಚಿಸಿದ್ದಾರೆ. ಇವರು ೧೯೫೮ರ ಆಗಸ್ಟ್ ೧೧ರಂದು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಚನ್ನಿಗರಾಯಪರ ಗ್ರಾಮದ ಮುನಿಸ್ವಾಮಿರೆಡ್ಡಿ ಮತ್ತು ಸುಬ್ಬಮ್ಮ ದಂಪತಿಗಳ ಮಗನಾಗಿ ಜನಿಸಿದರು. ತಾಳಕುಂಟೆ, ಲಕ್ಕೂರು ಮತ್ತು ಮಾಲೂರಿನಲ್ಲಿ ಕ್ರಮವಾಗಿ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಿಕ್ಷಣವನ್ನು ಪಡೆದು, ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದುಕೊಂಡದ್ದಲ್ಲದೆ ‘ಕೋಲಾರಜಿಲ್ಲೆಯ ಜಾತ್ರೆಗಳು’ ಎಂಬ ವಿಷಯದಲ್ಲಿ ಪಿಎಚ್.ಡಿ. ಮಹಾಪ್ರಬಂಧವನ್ನು ರಚಿಸಿ ಡಾಕ್ಟರೇಟ್ ಪದವಿಯನ್ನೂ ಪಡೆದರು. ಇವರು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಪ್ರಾಥಮಿಕ ಶಾಲಾಶಿಕ್ಷಕರಾಗಿ, ಪ್ರೌಢಶಾಲಾ ...

READ MORE

Related Books