ಪತ್ರಿಕೆಗಳಲ್ಲಿ ಬಂದ ಜನಪದ ಕಥೆಗಳು

Author : ಎಸ್.ಪಿ. ಪದ್ಮಪ್ರಸಾದ್‌

Pages 130

₹ 0.00




Year of Publication: 2022
Published by: ಮಿತ್ರ ಮಾಧ್ಯಮ
Address: ಬೆಂಗಳೂರು

Synopsys

‘ಪತ್ರಿಕೆಗಳಲ್ಲಿ ಬಂದ ಜನಪದ ಕಥೆಗಳು’ ಕೃತಿಯು ಎಲ್.ಆರ್. ಹೆಗಡೆ ಅವರ ಮೂಲ ಕೃತಿಯಾಗಿದ್ದು, ರೇಣುಕಾ ರಾಮಕೃಷ್ಣ ಭಟ್ಟ ಅವರು ಸಂಪಾದಿಸಿದ್ದಾರೆ. ಇಲ್ಲಿನ ಪಾಂಡಿತ್ಯಪೂರ್ಣ ಪೀಠಿಕೆಗಳು, ಮುನ್ನುಡಿಗಳು ಜಾನಪದ ಕ್ಷೇತ್ರದಲ್ಲಿ ಅವರ ಅಳವಾದ ಅಧ್ಯಯನವನ್ನು ಎತ್ತಿ ತೋರಿಸುತ್ತವೆ. ತುಲನಾತ್ಮಕ ವಿಶ್ಲೇಷಣೆಗಳು ನಿಜವಾಗಿಯೂ ಶ್ಲಾಘನೀಯ. ಉತ್ತರ ಕನ್ನಡದ ಬುಡಕಟ್ಟು ಜನಾಂಗಗಳ ಕುರಿತ ಅಧ್ಯಯನಗಳು ಅನನ್ಯವಾಗಿದೆ. ಸಂಶೋಧನಾ ಪ್ರಬಂಧಗಳು, ಭಾಷಣಗಳು, ಜಾನಪದ ಲೇಖನಗಳು ಉಲ್ಲೇಖನೀಯ. ಜಾನಪದ ಅಧ್ಯಯನದ ಜೊತೆಗೆ ಹೋಮಿಯೋಪಥಿ, ಆಯುರ್ವೇದ, ಹಳ್ಳಿಯ ಚಿಕಿತ್ಸಾ ಪದ್ಧತಿಗಳಲ್ಲಿಯೂ ಕೂಡ ಅಪಾರ ಜ್ಞಾನ ಮತ್ತು ಅನುಭವಗಳನ್ನು ಪಡೆದುಕೊಂಡಿದ್ದರು. ಸಾವಿರಾರು ರೋಗಿಗಳು ಇದರ ಲಾಭವನ್ನು ಪಡೆದುಕೊಂಡಿದ್ದಾರೆ ಎಂಬುವುದನ್ನು ಈ ಕೃತಿಯ ಮೂಲಕ ತಿಳಿಯಬಹುದು.

About the Author

ಎಸ್.ಪಿ. ಪದ್ಮಪ್ರಸಾದ್‌

ಎಸ್.ಪಿ. ಪದ್ಮಪ್ರಸಾದ್‌ ಜಾನಪದ, ಕಾವ್ಯ, ನಾಟಕ, ವಿಮರ್ಶೆ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪದ್ಮ ಪ್ರಸಾದವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ.  ತಂದೆ ಎಸ್.ಪಿ. ಪಾಯಪ್ಪಶೆಟ್ಟಿ, ತಾಯಿ ಜಿನ್ನಮ್ಮ. ಪ್ರಾರಂಭಿಕ ಶಿಕ್ಷಣ ಹೊಸನಗರದಲ್ಲಿ. ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಿಂದ ಬಿ.ಎಸ್ಸಿ ಪದವಿ ಮತ್ತು ನ್ಯಾಷನಲ್ ಕಾಲೇಜ್ ಆಫ್ ಎಜುಕೇಷನ್‌ನಿಂದ ಬಿ.ಇಡಿ. ಪದವಿಯನ್ನೂ,. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಹಾಗೂ ‘‘ಜೈನ ಜನಪದ ಸಾಹಿತ್ಯ-ಸಂಪಾದನೆ ಹಾಗೂ ಅಧ್ಯಯನ’’ ಪ್ರಬಂದ ಮಂಡಿಸಿ ಬೆಂಗಳೂರು ವಿಶ್ವ ವಿದ್ಯಾಲಯದಿಂದ ಪಡೆದ ಪಿಎಚ್.ಡಿ. ಪದವಿ ಪಡೆದಿದ್ದಾರೆ.  ಹೈಸ್ಕೂಲು ಅಧ್ಯಾಪಕರಾಗಿ ಪಿಎಚ್.ಡಿ. ಪದವಿಗಳಿಸಿದ ರಾಜ್ಯದ ...

READ MORE

Related Books