ಪವಿತ್ರ ಪಂಚಕನ್ಯೆಯರು- ಪರಮ ಪಂಚ ಮಿಥ್ಯೆಯರು

Author : ಮಹಾಬಲೇಶ್ವರ ರಾವ್

Pages 108

₹ 48.00




Published by: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ
Address: ಎಂ.ಜಿ.ಎಂ. ಕಾಲೇಜು, ಉಡುಪಿ-576102

Synopsys

‘ಪವಿತ್ರ ಪಂಚಕನ್ಯೆಯರು- ಪರಮ ಪಂಚ ಮಿಥ್ಯೆಯರು’ ಕೃತಿಯು ಮಹಾಬಲೇಶ್ವರ ರಾವ್ ಅವರ `ಅಹಲ್ಯಾ, ದ್ರೌಪದಿ, ತಾರಾ, ಕುಂತಿ (ಸೀತಾ), ಮಂಡೋದರಿ‘ ಇವರ ಬದುಕಿನ ಒಳವಿವರಗಳನ್ನು ಒಳಗೊಂಡಂತಹ ಕೃತಿಯಾಗಿದೆ. ಈ ಕೃತಿಯಲ್ಲಿನ ಕೆಲವೊಂದು ವಿಚಾರಗಳು ಹೀಗಿವೆ : ಈ ಹೆಣ್ಣುಗಳಲ್ಲಿ ಕೆಲವರು ಬಹು ಪತಿತ್ವವನ್ನು ಹೊಂದಿರುವಂಥರು. ಹಾಗಿದ್ದೂ ಅವರನ್ನು ಕನ್ಯೆಯರೆಂದು ಕರೆಯಲಾಯಿತು? ಎಂಬ ಪ್ರಶ್ನೆಗಳನ್ನು ಕೇಳಿಕೊಳ್ಳುತ್ತಲೇ ಅವರು ಬದುಕಿನಲ್ಲಿ ಅನುಭವಿಸಿದ ಏಳು ಬೀಳುಗಳನ್ನು ಈ ಪುಸ್ತಕ ತೆರೆದಿಡುತ್ತದೆ. `ಒಂದು ದೃಷ್ಟಿಯಿಂದ ಇವರು ಐವರೂ ಗಂಡಿನ ದಬ್ಬಾಳಿಕೆಗೆ ಒಳಗಾದವರು. ಆದರೂ ಬಾಳಿನ ಹೋರಾಟದಲ್ಲಿ ಸೋಲದೇ ಗೆದ್ದವರು‘ ಎಂದು ಮುನ್ನುಡಿಯಲ್ಲಿ ಬನ್ನಂಜೆ ಗೋವಿಂದಾಚಾರ್ಯ ವಿವರಿಸುತ್ತಾರೆ.

About the Author

ಮಹಾಬಲೇಶ್ವರ ರಾವ್

ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್‌ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.  ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್‌ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ.  ...

READ MORE

Related Books