ಪಯಣದ ಹಾದಿಯಲ್ಲಿ

Author : ಎಸ್. ಅನಂತನಾರಾಯಣ

Pages 147

₹ 5.00




Year of Publication: 1985
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ
Address: ನೃಪತುಂಗ ರಸ್ತೆ, ಬೆಂಗಳೂರು- 560002

Synopsys

‘ಪಯಣದ ಹಾದಿಯಲ್ಲಿ’ ಎಸ್. ಅನಂತ ನಾರಾಯಣ ಅವರ ಪ್ರಸಿದ್ಧ ಸಾಮಾಜಿಕ ಕಾದಂಬರಿ. 1985ರ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಪರವಾಗಿ ಅ.ರಾ. ಚಂದ್ರಹಾಸಗುಪ್ತ ಅವರು ಪ್ರಕಟಿಸಿದ ಕೃತಿ ಇದು. ಈ ಕೃತಿಯಲ್ಲಿ ಮಧ್ಯಮ ವರ್ಗದ ಜನರ ಬದುಕಿನ ಅನಾವರಣವಿದೆ.

 

About the Author

ಎಸ್. ಅನಂತನಾರಾಯಣ
(30 November 1925 - 25 August 1992)

ಎಸ್. ಅನಂತನಾರಾಯಣ  ಕನ್ನಡದ ಪ್ರಗತಿಶೀಲ ಬರಹಗಾರರಲ್ಲಿ ಪ್ರಮುಖರೆನಿಸಿದ್ದಾರೆ. ಪ್ರೊ. ಅನಂತ ನಾರಾಯಣ ಅವರು ನವೆಂಬರ್ 30, 1925 ರಲ್ಲಿ ಮೈಸೂರಿನಲ್ಲಿ ಜನಿಸಿದರು. ತಂದೆ ಆರ್. ಸದಾಶಿವಯ್ಯನವರು ಮತ್ತು ತಾಯಿ ರಂಗಮ್ಮನವರು.  ಇಂಗ್ಲಿಷ್ ಸಾಹಿತ್ಯದಲ್ಲಿ ಬಿ.ಎ. (ಆನರ್ಸ್) ಮತ್ತು ಎಂ.ಎ. ಪದವಿಗಳನ್ನು ಪ್ರಪ್ರಥಮ ಶ್ರೇಣಿಯಲ್ಲಿ ಚಿನ್ನದ ಪದಕಗಳೊಂದಿಗೆ ಗಳಿಸಿದರು. ಅವರು ಮೈಸೂರು ವಿಶ್ವವಿದ್ಯಾನಿಲಯದ ಹಲವಾರು ಕಾಲೇಜುಗಳಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಸಂಗೀತ, ನಾಟಕ ಕಾಲೇಜಿನಲ್ಲಿ ಮೂರು ವರ್ಷ ನಾಟಕ ಶಾಸ್ತ್ರದ ಬೋಧಕರಾಗಿ, ನಾಟಕ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ಧಾರೆ.  ನವೋದಯ ಕಾಲದ ಬರಹಗಾರರು ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡಿದ್ದು ಸಹಜ ಕ್ರಿಯೆ. ...

READ MORE

Related Books