ಪಿಪ್ಲಾಂತ್ರಿ

Author : ಶಿವರಾಂ ಪೈಲೂರು

Pages 40

₹ 40.00




Year of Publication: 2019
Published by: ಕೃಷಿ ಮಾಧ್ಯಮ ಕೇಂದ್ರ
Address: #113, 6ನೇ ಮುಖ್ಯರಸ್ತೆ, 7ನೇ ಅಡ್ಡರಸ್ತೆ, ಪಿಳ್ಳಪ್ಪ ಬ್ಲಾಕ್, ಗಂಗಾನಗರ ಅಂಚೆ: ಆರ್.ಟಿ. ನಗರ, ಬೆಂಗಳೂರು – 560032
Phone: 9483757707

Synopsys

ರಾಜಸ್ಥಾನದ ರಾಜ್‍ಸಮಂಡ್ ಜಿಲ್ಲಾ ಕೇಂದ್ರದಿಂದ ಸಮೀಪದಲ್ಲಿಯೇ ಇರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಆ ಗ್ರಾಮದಲ್ಲಿನ ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. ಒಂದು ಹೆಣ್ಣು ಮಗು ಜನಿಸಿದರೆ 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ ಮಾಡುತ್ತಾರೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ. ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ.  

ಈ ಯಶೋಗಾಥೆಯ ರೂವಾರಿ ಶ್ಯಾಮ್ ಸುಂದರ್ ಪಾಲೀವಾಲ್. ಅವರು ಪಿಪ್ಲಾಂತ್ರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದಾಗ 2006ರಲ್ಲಿ ಕಿರಣ್ ನಿಧಿ ಯೋಜನೆ ಸೇರಿದಂತೆ ವಿವಿಧ ಕೆಲಸಕಾರ್ಯಗಳನ್ನು ಕೈಗೆತ್ತಿಕೊಂಡರು. ಗಿಡ ನೆಡುವುದು ಮಾತ್ರವಲ್ಲದೇ ಬೇರೆ ಏನೆಲ್ಲಾ ಕಾರ್ಯಗಳಲ್ಲಿ ಮಾಡಿದ್ದಾರೆ ಎಂಬುದನ್ನು ತಿಳಿಯಲು ನೀವು ಓದಿ ಪಿಪ್ಲಾಂತ್ರಿ. 

About the Author

ಶಿವರಾಂ ಪೈಲೂರು

ಶಿವರಾಂ ಪೈಲೂರು ದಕ್ಷಿಣ ಕನ್ನಡ ಜಿಲ್ಲೆಯ ಚೊಕ್ಕಾಡಿಯವರು. ಕೃಷಿ ಕುಟುಂಬದವರಾದ ಇವರು ಪತ್ರಿಕೋದ್ಯಮದಲ್ಲಿ ಎಂ.ಎ, ಮತ್ತು ಕೃಷಿ ಸಂವಹನದಲ್ಲಿ ಡಾಕ್ಟರೇಟ್ ಪದವಿ ಗಳಿಸಿದ್ದಾರೆ. ೧೯೮೮ ರಲ್ಲಿ ಮಣಿಪಾಲದ ’ತರಂಗ’ ವಾರಪತ್ರಿಕೆಯಲ್ಲಿ ಉಪಸಂಪಾದಕರಾಗಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು, ಬಳಿಕ ಕೊಚ್ಚಿನ್ ನ ಸಂಬಾರ ಮಂಡಳಿಯಲ್ಲಿ ಉದ್ಯೋಗವನ್ನು ಕೈಗೊಂಡರು. ಸ್ಪೈಸ್ ಇಂಡಿಯಾ ಕನ್ನಡ ಮಾಸಪತ್ರಿಕೆಯ ಸಂಪಾದಕತ್ವವನ್ನು ವಹಿಸಿಕೊಂಡರು. ೧೯೯೧ ರಲ್ಲಿ ಕೇಂದ್ರ ಸರ್ಕಾರದ ಭಾರತೀಯ ಸಮಾಚಾರ ಸೇವೆಗೆ ಸೇರ್ಪಡೆಯಾದರು. ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಆಕಾಶವಾಣಿ, ದೂರದರ್ಶನ ವಿವಿಧ ಹುದ್ದೆಗಳಲ್ಲಿ ಮಂಗಳೂರು, ಧಾರವಾಡ, ದೆಹಲಿ ಮತ್ತು ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಪರಿಸರ ...

READ MORE

Related Books