ಪೂಜಾಸಾರಸಮುಚ್ಚಯಃ

Author : ಎರ್ತೂರು ಶಾಂತಿರಾಜಶಾಸ್ತ್ರಿ

Pages 217

₹ 195.00




Year of Publication: 2008
Published by: ಪಂಡಿತರತ್ನ ಎ.ಶಾಂತಿರಾಜಶಾಸ್ತ್ರಿ ಟ್ರಸ್ಟ್
Address: ಜಯನಗರ, ಬೆಂಗಳೂರು- 560070

Synopsys

ಎರ್ತೂರು ಶಾಂತಿರಾಜಶಾಸ್ತ್ರಿಗಳು ಸಂಪಾದಿಸಿರುವ ಕೃತಿ ಪೂಜಾಸಾರಸಮುಚ್ಚಯಃ ಇದು ಜೈನ ಶ್ರಾವಕ ಬಂಧುಗಳಿಗೆ ದಿನನಿತ್ಯದ ಪೂಜಾ ವಿಧಿ-ವಿಧಾನಗಳಿಗೆ ಅತ್ಯಾವಶ್ಯಕವಾದ ಗ್ರಂಥ. ಜೈನಗೃಹಸ್ಥರು ಪ್ರತಿದಿನವೂ ದೇವಪೂಜಾ, ಗುರುಸೇವಾ, ಸ್ವಾಧ್ಯಾಯ, ಸಂಯಮ, ತಪಸ್ಸು, ದಾನ ಈ ಷಟ್ಕರ್ಮಗಳನ್ನಾಚರಿಸಬೇಕೆಂದು ಶಾಸ್ತ್ರದಲ್ಲಿ ವಿಧಾಯಕವಾಗಿದೆ. ಆ ಷಟ್ಕರ್ಮಗಳಲ್ಲಿ ದೇವಪೂಜೆಯು ಮೊದಲನೇ ಕರ್ತವ್ಯ ಕರ್ಮವಾಗಿರುವುದರಿಂದ ಈ ಪುಸ್ತಕದಲ್ಲಿ ಹೆಚ್ಚಾಗಿ ನಿತ್ಯನೈಮಿತ್ತಿಕ ಪೂಜಾ ಪಾಠಗಳೇ ಸಂಗ್ರಹಿಸಲ್ಪಟ್ಟೆವೆ. ಪ್ರತಿಯೊಬ್ಬ ಗೃಹಸ್ಥನಿಗೂ ಈ ಪುಸ್ತಕವು ಬಹಳ ಉಪಯುಕ್ತವಾಗುತ್ತದೆ.

About the Author

ಎರ್ತೂರು ಶಾಂತಿರಾಜಶಾಸ್ತ್ರಿ

ಎರ್ತೂರು ಶಾಂತಿರಾಜ ಶಾಸ್ತ್ರಿಗಳು ಮೂಲತಃ ದಕ್ಷಿಣ ಕನ್ನಡ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಜೈನಕಾಶಿ ಮೂಡುಬಿದರೆ ಬಳಿಯ ಎರ್ತೂರು ಎಂಬ ಸಣ್ಣ ಹಳ್ಳಿಯವರು. ಸಾಧಾರಣ ರೈತ ಕುಟುಂಬದಲ್ಲಿ 1888ರಲ್ಲಿ ಜನಿಸಿದರು. ತಂದೆ- ಧರಣಪ್ಪಾರ್ಯ ಮತ್ತು ತಾಯಿ- ಚೆಲುವಮ್ಮ. ಚಿಕ್ಕಂದಿನಲ್ಲಿಯೇ ತಂದೆ ತಾಯಿಯನ್ನು ಕಳೆದುಕೊಂಡು ಸುತ್ತಮುತ್ತಲಿನ ಪ್ರೀತಿಯ ತೊಟ್ಟಿಲಲ್ಲಿ ಬೆಳೆದರು. ಅವರ ಪ್ರಾರಂಭಿಕ ವಿದ್ಯಾಭ್ಯಾಸವೆಲ್ಲ ಎರ್ತೂರು ಮತ್ತು ಕಾರ್ಕಳದಲ್ಲಿ ನಡೆದವು. ಪೂರ್ವಾಶ್ರಮದಲ್ಲಿ ಅವರ ಅಜ್ಜ (ತಾಯಿಯ ತಂದೆ) ನವರಾಗಿದ್ದ ಆದಿಸಾಗರ(ಆದಿರಾಜಯ್ಯ) ಮುನಿಗಳು, ಕಾರ್ಕಳದ ಅಂದಿನ ಶ್ರೀಗಳು ಮತ್ತು ಶ್ರವಣಬೆಳಗೊಳದ ಸ್ವಸ್ತಿಶ್ರೀ ನೇಮಿಸಾಗರ ವರ್ಣಿಯವರ ಮಹದಾಶೀರ್ವಾದ ಮತ್ತು ಮಾರ್ಗದರ್ಶನದ ಫಲವಾಗಿ ವಿದ್ಯಾಭ್ಯಾಸವು ...

READ MORE

Related Books