ಪ್ರಾಣೇಶ ಪಯಣ

Author : ಗಂಗಾವತಿ ಪ್ರಾಣೇಶ್

Pages 168

₹ 150.00




Year of Publication: 2017
Published by: ಸಾವಣ್ಣ ಎಂಟರ್ ಪ್ರೈಸಸ್
Address: ನಂ. 57, 1ನೇ ಮಹಡಿ, ಪುಟ್ಟಣ್ಣ ರಸ್ತೆ, ಬಸವನಗುಡಿ, ಬೆಂಗಳೂರು- 560004
Phone: 8026607011

Synopsys

‘ಪ್ರಾಣೇಶ ಪಯಣ’ ಗಂಗಾವತಿ ಪ್ರಾಣೇಶ್ ಅವರ ಪ್ರಬಂಧ ಸಂಕಲನ. ಈ ಕೃತಿಗೆ ಲೇಖಕ ಜೋಗಿ ಅವರು ಬೆನ್ನುಡಿ ಬರೆದಿದ್ದಾರೆ. ಈ ಕಷ್ಟಕಾಲದಲ್ಲಿ ನಗಿಸುವುದು ಕೂಡ ಒಂದು ಪುಣ್ಯದ ಕೆಲಸ. ಆ ಕೆಲಸವನ್ನು ಅತ್ಯಂತ ಶ್ರದ್ಧಾಭಕ್ತಿಗಳಿಂದ ಮಾಡಿಕೊಂಡು ಬರುತ್ತಿರುವ ಗಂಗಾವತಿ ಪ್ರಾಣೇಶ್,  ಕನ್ನಡದ ಹೆಮ್ಮೆಯನ್ನು ಗಡಿಯಾಚೆ ದಾಟಿಸಿದವರು ಎನ್ನುತ್ತಾರೆ ಜೋಗಿ.

ಹಾಸ್ಯವೆಂಬುದು ಸಭ್ಯತೆಯ ಗಡಿದಾಟುತ್ತಿದ್ದ ದಿನಗಳಲ್ಲಿ ಅಕುಟಿಲ ಮುಗುಳ್ನಗೆಯೊಂದು ಮೂಡುವಂತೆ ಮಾಡಿದ್ದು ಗಂಗಾವತಿ ಪ್ರಾಣೇಶ್ ಸಾಧನೆ. ಇದೀಗ ಪ್ರಾಣೇಶ್ ಅಕ್ಷರ ಜಗತ್ತಿಗೂ ಕಾಲಿಟ್ಟಿದ್ದಾರೆ. ಅವರ ಬರಹಗಳ ಶಕ್ತಿಯೆಂದರೆ ಅವರ ವಿಸ್ತಾರವಾದ ಓಡಾಟ ಮತ್ತು ವೈವಿಧ್ಯಮಯ ವ್ಯಕ್ತಿಗಳೊಂದಿಗಿನ ಒಡನಾಟ. ಆಧುನಿಕ ಜನಪದ ರೂಪುಗೊಳ್ಳುವುದೇ ಸಮಾಜದ ಜೊತೆಗಿನ ಒಡನಾಟದಿಂದ ಎಂದು ನಂಬಿರುವ ಎಲ್ಲರಿಗೂ ಪ್ರಾಣೇಶ್ ಹೇಳುವ ಪ್ರಸಂಗಗಳು ಪ್ರತ್ಯಕ್ಷ ಸಾಕ್ಷಿ. ಅವರು ಸುತ್ತಿದ ಊರು, ಕೇಳಿದ ಕತೆ, ಓದಿದ ಅಖ್ಯಾನ, ಅನುಭವಿಸಿದ ತಲ್ಲಣ, ಆ ಕ್ಷಣದ ಗ್ರಹಿಕೆ ಮತ್ತು ಅನುಭವದಿಂದ ಹುಟ್ಟಿದ ಅನುಭಾವ- ಎಲ್ಲವೂ ಈ ಕೃತಿಯೊಳಗೆ ಹರಳುಗಟ್ಟಿವೆ.

About the Author

ಗಂಗಾವತಿ ಪ್ರಾಣೇಶ್
(08 September 1961)

ಪ್ರಾಣೇಶ್ ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿಯವರು. ಸೆಪ್ಟಂಬರ್ 8, 1961ರಲ್ಲಿ ಗಂಗಾವತಿಯಲ್ಲಿ ಜನಿಸಿದ ಪ್ರಾಣೇಶ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಯಲಬುರ್ಗಿಯಲ್ಲೂ, ಬಿ.ಕಾಂ. ಪದವಿಯನ್ನು ಗಂಗಾವತಿಯಲ್ಲೂ ಪೂರೈಸಿದರು. ಪ್ರಾಣೇಶ್ ಅವರ ತಂದೆ ಸ್ವಾತಂತ್ರ್ಯ ಯೋಧ  ಬಿ.ವೆಂಕೋಬಾಚಾರ್ಯರು, ಶಾಲಾ ಶಿಕ್ಷಕರಾಗಿದ್ದರು. ತಾಯಿ ಸತ್ಯವತಿ ಬಾಯಿ. ತಾಯಿಯಿಂದ ಸಾಹಿತ್ಯಾಭಿರುಚಿಯನ್ನು ಬೆಳೆಸಿಕೊಂಡವರು.  ಹಾಸ್ಯಕ್ಕಷ್ಟೇ ಸೀಮಿತವಾದ ಪ್ರಾಣೇಶ್ ನಗಿಸುವವನ ನೋವುಗಳು, ನಗ್ತಾ ನಲಿ ಅಳ್ತಾ ಕಲಿ, ಪಂಚ್‌ ಪಕ್ವಾನ್ನ ಮುಂತಾದ ಪುಸ್ತಕಗಳನ್ನು ರಚಿಸಿದ್ದಾರೆ. ಜೊತೆಗೆ ಹಲವಾರು ಕ್ಯಾಸೆಟ್, ಸಿಡಿಗಳನ್ನೂ ಹೊರತಂದಿದ್ದಾರೆ. ಯೂ ಟ್ಯೂಬ್ ನಂತಹ ಅಂತರ್ಜಾಲ ಮಾಧ್ಯಮಗಳಲ್ಲಿ ಅವರ ಹಲವಾರು ಕಾರ್ಯಕ್ರಮಗಳ ತುಣುಕುಗಳು ನಿರಂತರವಾಗಿ ಜನಪ್ರೀತಿಯನ್ನು ಸಂಪಾದಿಸುತ್ತಿವೆ. ...

READ MORE

Related Books