`ಪ್ರಸ್ಥಾನ’ ಎಸ್.ಎಲ್.ಭೈರಪ್ಪನವರ ಸಾಹಿತ್ಯಕ್ಕೊಂದು ಪ್ರವೇಶಿಕೆ

Author : ಶತಾವಧಾನಿ ಆರ್. ಗಣೇಶ

Pages 80

₹ 150.00




Year of Publication: 2022
Published by: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು
Address: ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018\n
Phone: 080- 26612991 / 26623584

Synopsys

ಶತಾವಧಾನಿ ಆರ್. ಗಣೇಶ ಅವರ `ಪ್ರಸ್ಥಾನ’ ಎಸ್.ಎಲ್.ಭೈರಪ್ಪನವರ ಸಾಹಿತ್ಯಕ್ಕೊಂದು ಪ್ರವೇಶಿಕೆ ಕೃತಿಯು ಭೈರಪ್ಪ ಅವರ ಕುರಿತ ವಿಚಾರಗಳನ್ನು ತಿಳಿಸುತ್ತದೆ. ಅಷ್ಟೇಅಲ್ಲದೇ ಭೈರಪ್ಪನವರ ಕೃತಿಗಳ ಸಮಗ್ರ ದರ್ಶನವನ್ನು ನೀಡುವುದರ ಜೊತೆಗೆ ಅದರ ಸೈದ್ಧಾಂತಿಕ ನೆಲೆಗಳನ್ನೂ ನಿಖರವಾಗಿ ಗುರುತಿಸಿದೆ. ಪೂರಕವಾಗಿ ಅವರ ಜೀವನ ಸಾಧನೆಗಳ ವಿವರ ಇರುವುದು ಕೃತಿಯ ಮಹತ್ವವನ್ನು ಹೆಚ್ಚಿಸಿದೆ. ಈ ಕೃತಿಯು ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಂಡಿರುತ್ತದೆ.

About the Author

ಶತಾವಧಾನಿ ಆರ್. ಗಣೇಶ
(04 December 1962)

ಶತಾವಧಾನಿ ಗಣೇಶ ಅವರು ಉತ್ತಮ ವಾಗ್ಮಿಗಳು. ವಿದ್ವಾಂಸರು. ಅವಧಾನ ಕಲೆಯನ್ನು ರೂಢಿಸಿಕೊಂಡವರು. “ಕನ್ನಡದಲ್ಲಿ ಅವಧಾನ ಕಲೆ” ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿದ್ದಾರೆ. ಆರ್.ಶಂಕರನಾರಾಯಣ ಅಯ್ಯರ್ ಹಾಗೂ ಅಲಮೇಲಮ್ಮ ದಂಪತಿಯ ಪುತ್ರರು.04-12-1962ರಂದು ಕೋಲಾರದಲ್ಲಿ ಜನನ. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (UVCE), ದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವೀಧರರು. ಮೈಸೂರ್ ವಿಶ್ವವಿದ್ಯಾಲಯದ ಅಡಿಯಲ್ಲಿ ...

READ MORE

Related Books