ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಬೋಧನೆ

Author : ಮಹಾಬಲೇಶ್ವರ ರಾವ್

Pages 160

₹ 85.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಮಕ್ಕಳ ಮನೋ ವಿಕಸನದಲ್ಲಿ ಬಾಲ್ಯ ಮತ್ತು ಪ್ರೌಢ ಜೀವನ ಅತಿ ಮುಖ್ಯವಾಗುತ್ತದೆ. ಅವರಿಗೆ ಪ್ರಾಥಮಿಕ ಹಂತದಲ್ಲಿ ಮಾತೃಭಾಷೆ ಬೋಧನೆ ನೀಡಿದರೆ ಬೌದ್ಧಿಕ ವಿಕಾಸವು ವೃದ್ಧಿಯಾಗುವುದಲ್ಲದೆ ಹೆಚ್ಚು ಪರಿಣಾಮಕಾರಿ ಕಲಿಕೆ ಆಗುತ್ತದೆ. ಹೀಗಾಗಿ ಶಿಕ್ಷಣದಲ್ಲಿ ನಮ್ಮ ಮಾತೃಭಾಷೆ ಕಲಿಕೆಯ ಮಹತ್ವದ ಬಗ್ಗೆ ಈ ಕೃತಿಯಲ್ಲಿ ಲೇಖಕರು ಚರ್ಚಿಸಿದ್ದಾರೆ.

About the Author

ಮಹಾಬಲೇಶ್ವರ ರಾವ್

ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್‌ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.  ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್‌ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ.  ...

READ MORE

Related Books