ಪ್ರಿಯಾರಾಧನೆ

Author : ಕೃಷ್ಣಮೂರ್ತಿ ಪುರಾಣಿಕ

Pages 144

₹ 80.00




Year of Publication: 2013
Published by: ಇಂದಿರಾ ಪ್ರಕಾಶನ

Synopsys

ಕೃಷ್ಣಮೂರ್ತಿ ಪುರಾಣಿಕರ ಕಾದಂಬರಿಗಳಲ್ಲಿ ಜೀವನದ ಮಹತ್ವ ಎದ್ದು ಕಾಣುತ್ತಿದೆ. ವೈವಿಧ್ಯ ಈ ಕಾದಂಬರಿಗಳ ವೈಶಿಷ್ಟ್ಯವಾಗಿದೆ. ಶ್ರೀಯುತರ ಕಾದಂಬರೀ ಪ್ರಪಂಚದ ಹರವು ಬಹು ವಿಸ್ತಾರವಾಗಿದೆ, ಆಳವಾಗಿದೆ. ಸುಂದರ ನಿರೂಪಣಾ ಶೈಲಿಯು ಕತೆಯನ್ನು ರಸಜೇನನ್ನಾಗಿ ಮಾಡುತ್ತದೆ. ಪ್ರಸ್ತುತ ಇಂದಿರಾ ಪ್ರಕಾಶನದ ಮೂಲಕ ಪ್ರಕಟಗೊಂಡಿರುವ ಪ್ರಿಯಾರಾಧನೆ ಕಾದಂಬರಿ ಸಾಮಾಜಿಕ ಕಾದಂಬರಿಯಾಗಿದ್ದು, ಸಾಮಾಜಿಕ ಸಮಸ್ಯೆ, ಮಧ್ಯಮವರ್ಗದ ಕುಟುಂಬದ ಬವಣೆಗಳು ಸೇರಿದಂತೆ ಅನೇಕ ವಿಚಾರಗಳನ್ನು ಒಳಗೊಂಡಿದೆ.

About the Author

ಕೃಷ್ಣಮೂರ್ತಿ ಪುರಾಣಿಕ
(05 September 1911 - 09 November 1985)

ಅಗ್ರಶ್ರೇಣಿಯ ಕಾದಂಬರಿಕಾರ ಕೃಷ್ಣಮೂರ್ತಿ ಪುರಾಣಿಕರು ಹುಟ್ಟಿದ್ದು ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ.1911 ಸೆಪ್ಟಂಬರ್ 5ರಂದು. 1933ರಿಂದ ಸಾಹಿತ್ಯ ಕೃಷಿ ಆರಂಭಿಸಿದ ಪುರಾಣಿಕರು 1946ರಲ್ಲಿ 'ರಾಮೂನ ಕಥೆಗಳು' ಪ್ರಕಟಿಸಿದರು. ಅವರ 'ಧರ್ಮದೇವತೆ' ಕಾದಂಬರಿ 'ಕರುಣೆಯೇ ಕುಟುಂಬದ ಕಣ್ಣು' ಎಂಬ ಚಲನಚಿತ್ರವಾಗಿದೆ. ಪುರಾಣಿಕರ 11 ಕೃತಿಗಳು  ಬೆಳ್ಳೆತೆರೆ ಕಂಡಿವೆ.  'ಸನಾದಿ ಅಪ್ಪಣ್ಣ' ಕನ್ನಡಿಗರೆಂದೂ ಮರೆಯದ ಕೃತಿ. ಮೊದಲ ಪ್ರಕಟಿತ ಗದ್ಯ ಕೃತಿ, 'ರಾಮೂನ ಕಥೆಗಳು'. ಮೊದಲ ಕವನ ಸಂಕಲನ 'ಬಾಳ ಕನಸು'. ಮೊದಲ ಕಾದಂಬರಿ 'ಮುಗಿಲಮಲ್ಲಿಗೆ'. 'ಮೌನಗೌರಿ', 'ಮುತ್ತೈದೆ', `ಮನೆ ತುಂಬಿದ ಹೆಣ್ಣು', 'ಮಣ್ಣಿನ ಮಗಳು', 'ಕುಲವಧು', 'ಮನಸೋತ ಮನದನ್ನೆ', 'ಧರ್ಮ ...

READ MORE

Related Books