ಪ್ರೊ.ಟಿ. ಕೇಶವ ಭಟ್ಟ

Author : ತಾಳ್ತಜೆ ವಸಂತಕುಮಾರ

Pages 56

₹ 45.00




Year of Publication: 2015
Published by: ಕನ್ನಡ ಸಂಘ, ಕಾಂತಾವರ
Address: ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡ ಭವನ, ಕಾಂತಾವರ, ಅಂಚೆ-ಕಾಂತಾವರ-574129, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ
Phone: 8548933733

Synopsys

ಕವಿ- ವಿದ್ವಾಂಸರಾಗಿದ್ದ ಟಿ. ಕೇಶವ ಭಟ್ಟ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ’ಕನ್ನಡ ಸಾಹಿತ್ಯ ಪರಿಷತ್ಪತ್ರಿಕೆ’ ಹಾಗೂ ಬಿ.ಎಂ.ಶ್ರೀ ಪ್ರತಿಷ್ಠಾನದ ವಿದ್ವತ್‌ ಪತ್ರಿಕೆ ‘ಕರ್ನಾಟಕ ಲೋಚನ’ದ ಪ್ರಧಾನ ಸಂಪಾದಕರಾಗಿದ್ದರು. ಕಿರಿಯರ ವಿಶ್ವಕೋಶ ‘ಜ್ಞಾನ ಗಂಗೋತ್ರಿ’ಯ ಸಂಪಾದಕ ಮಂಡಲಿಯ ಸದಸ್ಯರಾಗಿದ್ದ ಅವರು ಎಚ್‌.ಎಲ್‌. ನಾಗೇಗೌಡರ ಸಂಪಾದಕರಾಗಿದ್ದ ‘ಜಾನಪದ ಕೋಶ’ ರಚನಾ ಸಮಿತಿಯ ಸದಸ್ಯರಾಗಿದ್ದರು. ಕಾವ್ಯ ಕುರಿತ ಸತ್ತ್ವಾಲೋಕನಂ (ಚಂಪೂಕಾವ್ಯ) ಶ್ರೀ ಚನ್ನವೀರಶರಣ ಕಥಾಮೃತ (ವಾರ್ಧಕ ಷಟ್ಪದಿ); ಕನ್ನಡ ಪ್ರಾಚೀನ ಸಾಹಿತ್ಯ ಲಕ್ಷಣಗಳು-ಮರುನೋಟ, ದ.ಕ. ಜಿಲ್ಲಾ ಜಾನಪದಗೀತೆಗಳು ಎಂಬ ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಲಂಕಾದಹನ, ಪಂಚವಟಿ ವಾಲಿ ಸುಗ್ರೀವ ಕಾಳಗ ಮುಂತಾದ ಯಕ್ಷಗಾನ ಪ್ರಸಂಗಗಳು; ಭಾಷಾ ದೀಪಿಕೆ, ಭಾಷಾಭಾಸ್ಕರ, ಭಾವಾರ್ಥ ವಿಸ್ತರಣ, ಕಾವ್ಯ ಪದಮಂಜರಿ ಸೇರಿದಂತೆ ಹಲವು ಶಬ್ದಕೋಶ-ಶೈಕ್ಷಣಿಕ ಕೃತಿಗಳನ್ನು ಪ್ರಕಟಿಸಿದ್ದಾರೆ. ದಿಲೀಪ, ಕಾರ್ತಿಕೇಯ, ವಿಶ್ವಕರ್ಮ, ಪಾರ್ವತಿ , ಗಾಂಧಾರಿ, ಗೋವಿನ ಹಾಡು ಮೊದಲಾದವು ಬಾಲ ಸಾಹಿತ್ಯ ಕೃತಿಗಳು. ಕಾಂತಾವರ ಕನ್ನಡ ಸಂಘ ಪ್ರಕಟಿಸುತ್ತಿರುವ ನಾಡಿಗೆ ನಮಸ್ಕಾರ ಸರಣಿಯ 89ನೇ ಕೃತಿಯಿದು.

 

About the Author

ತಾಳ್ತಜೆ ವಸಂತಕುಮಾರ
(27 December 1948)

ನಿವೃತ್ತ ಕನ್ನಡ ಪ್ರಾಧ್ಯಾಪಕರಾಗಿರುವ ಡಾ. ತಾಳ್ತಜೆ ವಸಂತಕುಮಾರ ವಿಮರ್ಶೆ ಹಾಗೂ ಸಾಂಸ್ಕೃತಿಕ ಸಂಶೋಧನೆಯಲ್ಲಿ ಗಣನೀಯ ಕೆಲಸ ಮಾಡಿದ್ದಾರೆ. ಈಗಿನ ಕೇರಳದ ಕಾಸರಗೋಡಿನ ತಾಳ್ತಜೆಯವರಾದ ಅವರು ಜನಿಸಿದ್ದು 1948 ಡಿಸೆಂಬರ 27ರಂದು. ಸ್ನಾತಕೋತ್ತರ ಪದವಿ (ಎಂಎ ಕನ್ನಡ) ಪಡೆದಿರುವ ಅವರು ಸಿದ್ಧಪಡಿಸಿದ ’ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ’ ಮಹಾಪ್ರಬಂಧಕ್ಕೆ ಪಿಎಚ್‌.ಡಿ. ಪದವಿ ದೊರೆತಿದೆ. ಸದ್ಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ವಾಸಿಸುತ್ತಿದ್ದಾರೆ. ಹರಿಹರನ ರಗಳೆಗಳು, ಸಿಂಗಾರ, ಆಯ್ದ ಲೇಖನಗಳು (ವಿಮರ್ಶೆ), ದಾಸಸಾಹಿತ್ಯ, ಹಣತೆಗೆ ಹನಿ ಎಣ್ಣೆ (ಸಾಂಸ್ಕೃತಿಕ ಸಂಶೋಧನೆ), ವಿ.ಕೃ. ಗೋಕಾಕ, ರಂ.ಶ್ರೀ. ಮುಗಳಿ, ಶಿವರಾಮ ಕಾರಂತ (ಜೀವನ ...

READ MORE

Related Books