ಪುಂಡೂರು ವೆಂಕಟರಾಜ ಪುಣಿಂಚತ್ತಾಯ

Author : ಧನಂಜಯ ಕುಂಬ್ಳೆ

Pages 52

₹ 45.00




Year of Publication: 2016
Published by: ಕನ್ನಡ ಸಂಘ, ಕಾಂತಾವರ
Address: ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡ ಭವನ, ಕಾಂತಾವರ, ಅಂಚೆ-ಕಾಂತಾವರ-574129, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ
Phone: 8548933733

Synopsys

ಬಹುಭಾಷಾ ವಿದ್ವಾಂಸರಾಗಿದ್ದ ಪುಂಡೂರು ವೆಂಕಟರಾಜ ಪುಣಿಂಚತ್ತಾಯ ಅವರು ಹೆಸರಾಂತ ಜಾನಪದ ವಿದ್ವಾಂಸರೂ ಹೌದು. ಪತ್ರಿಕಾವೃತ್ತಿಯಲ್ಲಿ ಕೆಲಸ ಮಾಡಿದ ಅವರು ಮೈಸೂರಿನ ಯುವಜನ ಮಾಸಪತ್ರಿಕೆ ’ವಿವೇಕ’ದಲ್ಲಿ ಸಂಪಾದಕರಾಗಿದ್ದರು. ಆ ಬಳಿಕ ಕೊಡಗಿನ ಪಾರಾಣೆ ಹೈಸ್ಕೂಲಿನಲ್ಲಿ ಅಧ್ಯಾಪಕರಾಗಿದ್ದರು. ನಂತರ ಕಾಸರಗೋಡಿಗೆ ಮರಳಿ ಅಧ್ಯಾಪಕರಾಗಿ ನಿವೃತ್ತರಾಗುವವರೆಗೆ ಅಲ್ಲಿಯೇ ಉಳಿದರು. ಸಾಹಿತ್ಯ, ಯಕ್ಷಗಾನ, ನಾಟಕ, ಭಾಷಣಗಳಲ್ಲಿ ಆಸಕ್ತರಾಗಿದ್ದ ಅವರು ವಿದ್ಯಾರ್ಥಿಗಳ ಪ್ರೀತಿಯ ಮೇಷ್ಟ್ರಾಗಿದ್ದರು. ಸಂಶೋಧನಾ ಕ್ಷೇತ್ರದಲ್ಲಿ ಅವರದು ಗಣನೀಯ ಸಾಧನೆ. ಅವರ ಬದುಕು ಬರೆಹದ ಕುರಿತ ವಿವರಗಳನ್ನು ಈ ಕೃತಿಯು ನೀಡುತ್ತದೆ. ಕಾಂತಾವರ ಕನ್ನಡ ಸಂಘವು ಪ್ರಕಟಿಸುತ್ತಿರುವ ’ನಾಡಿಗೆ ನಮಸ್ಕಾರ’ ಸರಣಿಯ 174ನೇ ಪುಸ್ತಕ.

About the Author

ಧನಂಜಯ ಕುಂಬ್ಳೆ
(11 December 1975)

ಲೇಖಕ ಧನಂಜಯ ಕುಂಬ್ಳೆ ಅವರು ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ  1975 ಡಿಸೆಂಬರ್ 11ರಂದು ಜನಿಸಿದರು. ಪ್ರಸ್ತುತ ದ.ಕ ಜಿಲ್ಲೆಯ ಮೂಡುಬಿದಿರೆ ನಿವಾಸಿ. ಕಲ್ಲಿಕೋಟೆ ವಿಶ್ವವಿದ್ಯಾಲಯದಲ್ಲಿ ಬಿ. ಎ. ಪದವಿಯನ್ನು ಮೂರನೇ ರ್‍ಯಾಂಕ್‌ನೊಂದಿಗೆ ಹಾಗೂ ನಂತರ 1999ರಲ್ಲಿ ಕಣ್ಣೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನೂ ಸಹ ತೃತಿಯ ರ್‍ಯಾಂಕ್‌ನೊಂದಿಗೆ ಪೂರೈಸಿದರು. ‘ಅರುಣಾಬ್ಜ ಮತ್ತು ಕುಮಾರವ್ಯಾಸ: ತೌಲನಿಕ ಅಧ್ಯಯನ’ ಅವರ ಪಿಎಚ್‌.ಡಿ ಗ್ರಂಥ. ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ, ಮೂಡುಬಿದಿರೆಯ ಆಳ್ವಾಸ್ ಪದವಿ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿದ್ದ ಇವರು ಈಗ  ಮಂಗಳೂರು ವಿಶ್ವವಿದ್ಯಾಲಯದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಅವರ ಮೊದಲ ...

READ MORE

Related Books