ಪುಷ್ಪಗಂಧಿ

Author : ಕಗ್ಗೆರೆ ಪ್ರಕಾಶ್

Pages 520

₹ 500.00




Year of Publication: 2018
Published by: ಮನುಚೈತ್ರ ಪ್ರಕಾಶನ
Address: : # 326,5ನೇ ಕ್ರಾಸ್, 3ನೇ ಹಂತ, ಭುವನೇಶ್ವರಿ ನಗರ, ಬೆಂಗಳೂರು 560085

Synopsys

ಖ್ಯಾತ ಕವಿ ಎಂ.ಎನ್. ವ್ಯಾಸರಾವ್ ಅವರ ಸಮಗ್ರ ಕಥೆಗಳನ್ನು ಸಂಪಾದಿಸಿದ ಕೃತಿ-ಪುಷ್ಪಗಂಧಿ. ಲೇಖಕರಾದ ಕಗ್ಗೆರೆ ಪ್ರಕಾಶ ಹಾಗೂ ಶ್ರೀಧರ ಬನವಾಸಿ ಅವರು ಸಂಪಾದಕರು. ಕನ್ನಡ ಚಲನಚಿತ್ರಗೀತೆಗಳನ್ನು ರಚಿಸಿ ಪ್ರಸಿದ್ಧಿ ಪಡೆದಿರುವ ಎಂ.ಎನ್. ವ್ಯಾಸರಾವ್ ಅವರು ಕಥೆಗಳನ್ನು ರಚಿಸುವ ಮೂಲಕವೂ ಕನ್ನಡ ಸಾಹಿತ್ಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಬೆಳ್ಳಿ ಮೂಡುವ ಮುನ್ನ. ಮಳೆಯಲ್ಲಿ ನೆನೆದ ಮರಗಳು ಹೀಗೆ ಹಲವಾರಿ ಕಥೆಗಳನ್ನು ಬರೆದಿದ್ದು, ಬಹುತೇಕ ಕಥೆಗಳು ಇತರೆ ಭಾಷೆಗಳಿಗೂ ಅನುವಾದಗೊಂಡಿವೆ. ಇವರ ಮಳೆಯಲ್ಲಿ ನೆನೆದ ಮರಗಳು ಕಥಾಸಂಕಲನಕ್ಕೆ ಸಾಹಿತ್ಯ ಅಕಾಡೆಮಿ ಬಹುಮಾನ ಬಂದಿದೆ.

About the Author

ಕಗ್ಗೆರೆ ಪ್ರಕಾಶ್
(01 June 1971)

ಕಗ್ಗೆರೆ ಪ್ರಕಾಶ್ ಅವರು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಗ್ಗೆರೆ ಗ್ರಾಮದವರು. 1971 ಜೂನ್ 1 ರಂದು ಜನನ. ತಂದೆ ಕೆ.ಸಿ.ಚೆನ್ನಾಚಾರ್, ತಾಯಿ ಅಮ್ಮಯಮ್ಮ. ತಮ್ಮ ಹೆಸರಿನ ಮುಂದೆ ಹುಟ್ಟೂರನ್ನು ಸೇರಿಸಿಕೊಂಡು ಕನ್ನಡ ಸಾರಸ್ವತ ಲೋಕದಲ್ಲಿ ‘ಕಗ್ಗೆರೆ ಪ್ರಕಾಶ್’ ಎಂದೇ ಚಿರಪರಿಚಿತರು. ಬಂಡಾಯ ಸಾಹಿತ್ಯ ಸಂಘಟನೆ ಮೂಲಕ ಗುರುತಿಸಿಕೊಂಡವರು. ಮೈಸೂರು ಮುಕ್ತ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ ಡಿಪ್ಲೊಮಾ ಪದವೀಧರರು. 1994 ರಿಂದ ಹೊಸ ದಿಗಂತ, ಆಂದೋಲನ, ಪ್ರಜಾಮತ, ಕರ್ನಾಟಕ ನ್ಯೂಸ್ ನೆಟ್, ವಿಕ್ರಾಂತ ಕರ್ನಾಟಕ, ಹಾಯ್ ಬೆಂಗಳೂರು, ಚಿತ್ತಾರ, ಕರ್ನಾಟಕ ಟೀವಿ ಲೋಕ, ಕನ್ನಡಪ್ರಭ ಪತ್ರಿಕೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ದುಡಿದವರು. ಇವರ ಕಾವ್ಯ-ಕಥೆ, ಚಿಂತನೆಗಳು ಆಕಾಶವಾಣಿ, ಕಿರುತೆರೆಗಳಲ್ಲೂ ಬಿತ್ತರಗೊಂಡಿವೆ. ಬೆಂಗಳೂರಿನಲ್ಲಿ ...

READ MORE

Related Books