ರಾ.ಶಿ.

Author : ಎಚ್.ಎಸ್. ಗೋಪಾಲರಾವ್

Pages 132

₹ 60.00




Year of Publication: 2005
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 7353530805 / 080 - 20161913

Synopsys

ರಾ.ಶಿ.(ರಾಮಸ್ವಾಮಯ್ಯ ಶಿವರಾಂ) ಅವರು ಕನ್ನಡದ ವಿಶಿಷ್ಟ ಲೇಖಕರು. ವೈದ್ಯರೊಬ್ಬರು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು, ವೃತ್ತಿಯಂತೆ ಪ್ರವೃತ್ತಿಯಲ್ಲೂ ಅನನ್ಯ ಸಾಧನೆ ಮಾಡಿದವರು. ಜ್ಞಾನದಾಹ, ಸಾಹಿತ್ಯಕ ಅಭೀಪ್ಸೆ ಮತ್ತು ಜೀವನೋತ್ಸಾಹಗಳ ಸಂಗಮವೇ ಅವರಾಗಿದ್ದರು. ‘ಕೊರವಂಜಿ‘ ಯ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ನಗುವನ್ನು ಅರಳಿಸಿದ ಮಾಂತ್ರಿಕರೂ ರಾ.ಶಿ. ತಮ್ಮ ಬಹುಮುಖೀ ಸಾಧನೆಗಳಿಂದ ಅವರು ಕನ್ನಡ ಸಾಹಿತ್ಯ ಲೋಕದ ಮರೆಯಲಾಗದ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ರಾಶಿ ಅವರು ತಮ್ಮ ’ಮನಮಂಥನ’ ಕೃತಿಗಾಗಿ  1976ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಗಳಿಸಿದ್ದಾರೆ.

ರಾ.ಶಿ ಅವರ ಜೀವನ ಮತ್ತು ಸಾಧನೆಯನ್ನು ಪರಿಚಯಿಸುವ ಕೃತಿಯನ್ನು ರಚಿಸಿದವರು, ಅವರ ಕುರಿತು ತಲಸ್ಪರ್ಶಿ ಅಧ್ಯಯನ ನಡೆಸಿರುವ, ಸೃಜನಶೀಲ ಸಾಹಿತಿಗಳೂ, ಇತಿಹಾಸ ವಿದ್ವಾಂಸರೂ ಆಗಿರುವ ಎಚ್.ಎಸ್. ಗೋಪಾಲ ರಾವ್.

About the Author

ಎಚ್.ಎಸ್. ಗೋಪಾಲರಾವ್
(18 November 1946)

ಡಾ. ಎಚ್.ಎಸ್. ಗೋಪಾಲರಾವ್  ಅವರು 1946ರ ನವೆಂಬರ್‌ 18ರಂದು ನೆಲಮಂಗಲ ತಾಲ್ಲೂಕಿನ ಹುಲ್ಲೇಗೌಡನ ಹಳ್ಳಿಯಲ್ಲಿ ಜನಿಸಿದರು. ಎಲೆಕ್ಟ್ರಿಕಲ್ ಇಂಜನಿಯರಿಂಗ್ ಡಿಪ್ಲೊಮ ಮುಗಿಸಿ ನಂತರ ಅವರು ಮೈಸೂರು ವಿವಿ ಕನ್ನಡ ಎಂ.ಎ. (1984- ಎರಡು ಚಿನ್ನದ ಪದಕ) ಪದವಿ ಪಡೆದರು.  ಶಾಸನಗಳ ಹಿನ್ನೆಲೆಯಲ್ಲಿ ಕಲ್ಯಾಣ ಚಾಲುಕ್ಯ ದೇವಾಲಯಗಳು ಒಂದು ಸಾಂಸ್ಕೃತಿಕ ಅಧ್ಯಯನ ಕುರಿತು ಪಿಎಚ್. ಡಿ.  ಪದವಿ ಪಡೆದರು. (ಮೈಸೂರು ವಿ ವಿ 1991). ಸರ್ಕಾರಿ ಕಾರ್ಯನಿರ್ವಾಹಕ ಎಂಜಿನಿಯರ್, ಕೆಪಿಟಿಸಿಎಲ್ ನಿಯಮಿತ, (ಕನ್ನಡ ಸಮನ್ವಯಾಧಿಕಾರಿಯಾಗಿ) ಕರ್ನಾಟಕ ಇತಿಹಾಸ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿಯಾಗಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶಾಸನ ಶಾಸ್ತ್ರ ಬೋಧಕರಾಗಿ ಕೆಲಸ ನಿರ್ವಹಿಸಿದ್ದಾರೆ.  ಜೇನು ನಂಜು, ...

READ MORE

Related Books