ರಾಜ್ಯದಾಹ

Author : ತ.ರಾ.ಸು. (ತ.ರಾ. ಸುಬ್ಬರಾವ್)

Pages 120

₹ 90.00




Year of Publication: 2011
Published by: ಹೇಮಂತ ಸಾಹಿತ್ಯ
Address: # 972 ಸಿ, 62ನೇ ಅಡ್ಡರಸ್ತೆ, 10ನೇ ಮುಖ್ಯ, 63ನೇ ಅಡ್ಡರಸ್ತೆ, 4ನೇ ಎಂ. ಬ್ಲಾಕ್, 4ನೇ ಇ-ಬ್ಲಾಕ್ , ಮಂಜುನಾಥ ನಗರ, ರಾಜಾಜಿನಗರ, ಬೆಂಗಳೂರು-560010

Synopsys

ಕನ್ನಡದ ಖ್ಯಾತ ಕಾದಂಬರಿಕಾರ ತ.ರಾಸು. ಅವರು ಬರೆದ ಐತಿಹಾಸಿಕ ಕಾದಂಬರಿ-ರಾಜ್ಯದಾಹ. ದುರ್ಗಾಸ್ತಮಾನ, ಕಂಬನಿಯ ಕುಯಿಲು, ರಕ್ತರಾತ್ರಿ ಸೇರಿದಂತೆ ಚಿತ್ರದುರ್ಗ ಇತಿಹಾಸಕ್ಕೆ ಸಂಬಂಧಿಸಿ ಬರೆದ ಕಾದಂಬರಿಗಳ ಪೈಕಿ ‘ರಾಜ್ಯದಾಹ’ ವೂ ಒಂದು. ಸರ್ಜೆ ನಾಯಕರು, ಅವರ ಮಕ್ಕಳೂ, ಓಬ್ಬಣ್ಣನಾಯಕ, ದೇಸಣ್ಣ, ದಳವಾಯಿ ಮುದ್ದಣ್ಣ , ಚಿಕ್ಕಣ್ಣ ನಾಯಕ ಹೀಗೆ ಪ್ರತಿಪಾತ್ರವೂ ತನ್ನದೇ ಮಿತಿಯಲ್ಲಿ ನ್ಯಾಯ ಒದಗಿಸುತ್ತವೆ. ಚಿಕ್ಕಣ್ಣ ನಾಯಕರಿಗೆ ಕಾಮದ ಹುಚ್ಚು ಹಿಡಿಯುತ್ತದೆ. ಮದ್ಯವ್ಯಸನಿಯಾಗುತ್ತಾನೆ. ಇದನ್ನು ನೆಪವಾಗಿಸಿಕೊಂಡು ‘ರಾಜ್ಯದಾಹ’ಕ್ಕೆ ಕಾರ್ಯೋನ್ಮುಖವಾಗುವ ಸಂಚು ಈ ಕಾದಂಬರಿಯ ವಸ್ತು.

About the Author

ತ.ರಾ.ಸು. (ತ.ರಾ. ಸುಬ್ಬರಾವ್)
(12 June 1906 - 10 April 1984)

ತಳುಕು ರಾಮಸ್ವಾಮಯ್ಯ ಸುಬ್ಬರಾಯ(ತ.ರಾ.ಸು) ಹುಟ್ಟಿದ್ದು 1906 ಜೂನ್ 12 ಚಿತ್ರದುರ್ಗ ಜಿಲ್ಲೆಯ ಚೆಳ್ಳೆಕೆರೆ ತಾಲ್ಲೂಕಿನ ತಳುಕು ಎಂಬ ಗ್ರಾಮದಲ್ಲಿ. ಮೂಲ ಆಂಧ್ರಪ್ರದೇಶದವರು. ತಂದೆ ರಾಮಸ್ವಾಮಯ್ಯ ಅವರು ತಳುಕು ಗ್ರಾಮಕ್ಕೆ ಬಂದು ನಂತರ ಚಿತ್ರದುರ್ಗದಲ್ಲಿ ಪ್ಲೀಡರ್ ಆಗಿದ್ದರು. ಸುಬ್ಬಾರಾಯರು ಇಂಟರ್ ಮೀಡಿಯೆಟ್ನಲ್ಲಿದ್ದಾಗ ದೇಶದ ಸ್ವಾತಂತ್ಯ್ರ ಚಳವಳಿಯಲ್ಲಿ ಧುಮುಕಿದರು. ಪ್ರಮುಖ ಕೃತಿಗಳು: ಕಂಬನಿಯ ಕುಯಿಲು, ರಕ್ತರಾತ್ರಿ, ದುರ್ಗಾಸ್ತಮಾನ, ನೃಪತುಂಗ, ಸಿಡಿಲ ಮೊಗ್ಗು, ಶಿಲ್ಪಶ್ರೀ, ಕಸ್ತೂರಿ ಕಂಕಣ, ತಿರುಗುಬಾಣ-, ಈ ಕಾದಂಬರಿಗಳು ಬರೆಹಾ ಕೌಶಲ್ಯಕ್ಕೆ ಹಿಡಿದ ಕನ್ನಡಿ. ಚಲನಚಿತ್ರವಾದ ಕಾದಂಬರಿಗಳು: ಚಂದವಳ್ಳಿಯ ತೋಟ, ಹಂಸಗೀತೆ (1956ರಲ್ಲಿ ಬಸಂತ ಬಹಾರ್ ಹೆಸರಲ್ಲಿ ಹಿಂದಿ ಚಲನಚಿತ್ರವಾಗಿತ್ತು.) ನಾಗರಹಾವು, ...

READ MORE

Related Books