ರಾಘವಾಂಕನ ಹರಿಶ್ಚಂದ್ರಕಾವ್ಯ ಪ್ರವೇಶ

Author : ಜಿ.ಎಸ್. ಭಟ್

Pages 108

₹ 100.00




Year of Publication: 2018
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ನಡುಗನ್ನಡ ಸಾಹಿತ್ಯದಲ್ಲಿ ಪ್ರಮುಖ ಹೆಸರು ರಾಘವಾಂಕನದು. ತನ್ನ ’ಹರಿಶ್ಚಂದ್ರ ಕಾವ್ಯ’ದ ಮೂಲಕ ಕನ್ನಡಿಗಿರುವ ಮಾತಾಗಿರುವ ರಾಘವಾಂಕನ ಕಾವ್ಯ ಕೌಶಲ ಗಮನ ಸೆಳೆಯುವಂತಹದ್ದು. ಆರು ಸಾಲಿನ ಪದ್ಯಗಳ ಛಂದಸ್ಸಿನಲ್ಲಿ ಬರೆಯುವ ರಾಘವಾಂಕ ಷಟ್ಪದಿಯ ಕವಿ ಎಂದೇ ಚಿರಪರಿಚಿತ.

ಹಂಪೆಯ ನಿವಾಸಿ ಕವಿ ಹರಿಹರನ ಶಿಷ್ಯನಾಗಿದ್ದ ರಾಘವಾಂಕನ ಮೇರು ಕೃತಿ ’ಹರಿಶ್ಚಂದ್ರ ಕಾವ್ಯ’. ಹರಿಶ್ಚಂದ್ರ ಕಾವ್ಯವನ್ನು ಹೇಗೆ ಪ್ರವೇಶಿಸಬೇಕು- ಓದಿನ ಕ್ರಮ- ಅರ್ಥೈಸಿಕೊಳ್ಳುವ ವಿಧಾನವನ್ನು ಜಿ.ಎಸ್. ಭಟ್ಟ ಅವರು ಈ ಪುಸ್ತಕದಲ್ಲಿ ಮಾಡಿದ್ದಾರೆ.

About the Author

ಜಿ.ಎಸ್. ಭಟ್

ಹಿರಿಯ ಲೇಖಕ ಜಿ.ಎಸ್ ಭಟ್ (ಸಾಗರ) 1944ರಲ್ಲಿ ಹೊನ್ನಾವರದ ಗಜನಿ ಮಠದಲ್ಲಿ ಜನಿಸಿದರು. ಸಾಗರದ ಲಾಲ ಬಹುದ್ದೂರ್ ಶಾಸ್ತ್ರೀ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ನಿವೃತ್ತರಾಗಿರುವ ಜಿ.ಎಸ್ ಭಟ್ ಅವರು ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ಮತ್ತು ಪರಿಣತಿ ಹೊಂದಿರುವರು. ಇವರು ಯಕ್ಷಗಾನ ಕುರಿತ ಸಂಶೋಧನಾ ಲೇಖನಗಳು, ಕತೆ, ಕವಿತೆ, ಅಂಕಣಗಳಲ್ಲಿ ತಮ್ಮ ಸಾಹಿತ್ಯ ಕೃಷಿಯನ್ನು ಮಾಡಿದ್ದಾರೆ. ರಂಗಭೂಮಿ, ಯಕ್ಷಗಾನ ವಿದ್ವಾಂಸರಾಗಿರುವ ಅವರು ಸಾಂಸ್ಕೃತಿಕ, ಸಂಘಟಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.  ಕೃತಿಗಳು: ಕುಮಾರವ್ಯಾಸನ ಕರ್ಣಾಟಭಾರತ ಕಥಾ ಮಂಜರಿ ಪ್ರವೇಶ, ರಾಘವಾಂಕನ ಹರಿಶ್ಚಂದ್ರಕಾವ್ಯ ಪ್ರವೇಶ, ಅಕ್ಕಮ್ಮಜ್ಜಿಯ ಗಂಡನೂ ವಾಣಾಸಜ್ಜನ ಹೆಣ್ತಿಯೂ, ಕೆರೆಮನೆ ಶಂಭು ಹೆಗಡೆ ಅಧ್ಯಯನ, ಪಾವೆಂ ಕಸ್ತೂರಿ, ಮಂಜೀ ಮಹಾದೇವನ ಗಂಜೀ ಪುರಾಣ, ನೆನಪಿನ ರಂಗಸ್ಥಳ,    ...

READ MORE

Related Books