ರಾಜರ್ಷಿ ಕೆಂಗಲ್ಲರ ಭಾಷಣಗಳು

Author : ಕೆ.ಎಸ್. ಭಗವಾನ್

Pages 280

₹ 143.00




Year of Publication: 2018
Published by: ಗೋಧೂಳಿ ಪ್ರಕಾಶನ
Address: ನಂ. 35, ಗೋಧೂಳಿ, 5ನೇ ಬಿ ಅಡ್ಡರಸ್ತೆ, ಸಿಂಡಿಕೇಟ್ ಬ್ಯಾಂಕ್ ಬಡಾವಣೆ, ತುಂಗಾನಗರ, ಬೆಂಗಳೂರು-560091

Synopsys

ಕೆಂಗಲ್ ಹನುಮಂತರಾಯರು ಮೈಸೂರು ಮಹಾರಾಜ ಅವರಿಂದ ರಾಜರ್ಷಿ ಎಂಬ ಬಿರುದು ಪಡೆದ ಹಾಗೂ ಬೆಂಗಳೂರಿನಲ್ಲಿ ವಿಧಾನಸೌಧ ನಿರ್ಮಿಸಿದ ಅಂದಿನ ಮುಖ್ಯಮಂತ್ರಿ ಖ್ಯಾತಿ ಉಳ್ಳವರು. ಅವರು ವಿಧಾನಸೌಧದ ಒಳಗೆ ಹಾಗೂ ಹೊರಗೆ ಮಾಡಿರುವ ದಾಖಲಾರ್ಹ ಭಾಷಣಗಳನ್ನು ಲೇಖಕ ಪ್ರೊ. ಕೆ.ಎಸ್. ಭವಾನ್ ಅವರು ಸಂಗ್ರಹಿಸಿ, ಸಂಪಾದಿಸಿ ಒಂದೆಡೆ ನೀಡಿದ್ದೇ ಈ ಕೃತಿಯ ಹೆಗ್ಗಳಿಕೆ. ಪ್ರತಿ ಭಾಷಣದಲ್ಲಿ ರಾಜ್ಯದ ಉನ್ನತಿ, ಅಭಿವೃದ್ಧಿ, ಮಾನವೀಯ ಅಂಶಗಳು, ಅವರ ದೂರದೃಷ್ಟಿ ಇತ್ಯಾದಿ ಅಂಶಗಳನ್ನು ಗುರುತಿಸಬಹುದು.

About the Author

ಕೆ.ಎಸ್. ಭಗವಾನ್
(14 July 1945)

ವಿಮರ್ಶಕ, ಅನುವಾದಕರಾದ ಕೆ.ಎಸ್.ಭಗವಾನ್ ಅವರು 14-07-1945ರಂದು ಮೈಸೂರು ಜಿಲ್ಲೆಯ ಕಲ್ಲಹಳ್ಳಿಯಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಅವರು ಅಮೆರಿಕಾದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಡಿ.ಲಿಟ್.ಪದವಿಯನ್ನೂ ಪಡೆದಿದ್ದಾರೆ. ಬಂಡಾಯ ವಿಮರ್ಶೆಯ ಮೊದಲ ಮತ್ತು ಮುಖ್ಯ ವಿಮರ್ಶಕರಾದ ಭಗವಾನ್ ವಿಮರ್ಶೆಯಲ್ಲಿ ಅಂತರ್ ಶಿಸ್ತೀಯ ಅಧ್ಯಯನಗಳನ್ನು ಪ್ರಾರಂಭಿಸಿದವರು.  ಮೈಸೂರಿನ ಕುವೆಂಪು ನಗರದಲ್ಲಿ ವಾಸವಾಗಿರುವ ಅವರು, ಮೈಸೂರಿನ ಮಹಾರಾಜ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. ಅನುವಾದಕರಾಗಿ ಹೆಸರುವಾಸಿಯಾಗಿರುವ ಭಗವಾನ್ ಷೇಕ್ಸ್ ಪಿಯರ್ ನ ಒಂಬತ್ತು ಮಹತ್ವದ ನಾಟಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಅವರ ಕೃತಿ ಶಂಕರಾಚಾರ್ಯ ಮತ್ತು ಪ್ರತಿಗಾಮಿತನ ...

READ MORE

Related Books