ರಾಜಸೂಯದ ರಾಜಕೀಯ

Author : ಕೆ.ಎಸ್‍. ನಾರಾಯಣಾಚಾರ್ಯ

Pages 592

₹ 500.00




Year of Publication: 2014
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ-560020
Phone: 94481 10034

Synopsys

‘ರಾಜಸೂಯಾದ ರಾಜಕೀಯ’ ಈ ಕೃತಿಯನ್ನು ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಅವರು ರಚಿಸಿದ್ದಾರೆ. ರಾಜಸೂಯ ಎಂಬುದು ಒಂದು ಧಾರ್ಮಿಕ ವಿಧಿ. ಇಡೀ ವಿಶ್ವವನ್ನು ಆಳಲು ಅರ್ಹ ಇರುವ ರಾಜನು ಮಾತ್ರ ಹಮ್ಮಿಕೊಳ್ಳುವ ಯಜ್ಞ. ಇಡೀ ವಿಶ್ವದ ಆಡಳಿತವನ್ನು ಕೈವಶ ಮಾಡಿಕೊಳ್ಳಲು ಚಾಲನೆಯಾಗಿ ಈ ಯಜ್ಞವನ್ನು ಕೈಗೊಳ್ಳಲಾಗುತ್ತದೆ. ಮಹಾಭಾರತದ ಕಥೆಯ ಧರ್ಮರಾಜನು ರಾಜಸೂಯ ಯಜ್ಞವನ್ನು ಆರಂಭಿಸುತ್ತಾನೆ. ಕೌರವರಲ್ಲಿ ಆರಂಭವಾದ ತಲ್ಲಣಗಳು, ರಾಜಕೀಯದ ಚಟುವಟಿಕೆಗಳನ್ನು ಚರ್ಚಿಸಿದ್ದು, ಈ ಕೃತಿಯ ವಿಶೇಷ.

About the Author

ಕೆ.ಎಸ್‍. ನಾರಾಯಣಾಚಾರ್ಯ
(31 October 1933 - 26 November 2021)

ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ  (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್‌ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...

READ MORE

Related Books