ದೇವಚಂದ್ರ ವಿರಚಿತ ರಾಜಾವಳಿ ಕಥೆ

Author : ರಾಮೇಗೌಡ (ರಾಗೌ)

Pages 418

₹ 260.00




Year of Publication: 2012
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ರಾಜಾವಳಿ ಕಥಾವತಾರ ಪ್ರಾಚೀನ ಕನ್ನಡದ ಹೆಮ್ಮೆಯ ಗದ್ಯ ಕೃತಿ. ಮೂಲ ಕೃತಿಯಲ್ಲಿ ಜೈನಾವತರಣದ ಛಾಯೆ ಎದ್ದು ಕಾಣುತ್ತಿದ್ದು, ಜೈನ ಪಾರಿಭಾಷಿಕ ‘ಲೋಕ ಸ್ವರೂಪ’ದ ಬಗ್ಗೆಯೂ ಮಾಹಿತಿಯು ಕಂಡು ಬರುತ್ತದೆ. ಧಾರ್ಮಿಕ, ಚಾರಿತ್ರಿಕ ಮತ್ತು ಕಾಲ್ಪನಿಕಗಳ ಸಂಯೋಜನೆಯಂತೆ ಸಾಗುವ ಮೂಲ ಗದ್ಯಕ್ಕೆ ಕಿಂಚಿತ್ತೂ ಚ್ಯುತಿ ಬಾರದಂತೆ, ಯಾವುದೇ ವ್ಯಾಕೃರಣ ತೊಂದರೆ ಆಗದಂತೆ, ಅರ್ಥ ವ್ಯತ್ಯಾಸ ಕಂಡು ಬರದಂತೆ ಡಾ. ರಾಗೌರವರು ಈ ಕೃತಿಯನ್ನು ರಚಿಸಿದ್ದಾರೆ. ಹಳೆಗನ್ನಡದ ಸಾಹಿತ್ಯದ ಓದು,ಮರೆಯಾಗುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ಈ ಕೃತಿ ಯುವ ತಲೆಮಾರಿಗೆ ಹೊಸತರದ ಓದಿನ ರುಚಿಯನ್ನು ಕೊಡುತ್ತದೆ.

About the Author

ರಾಮೇಗೌಡ (ರಾಗೌ)

ಜಾನಪದ ವಿದ್ವಾಂಸ ಡಾ. ರಾಮೇಗೌಡ (ರಾಗೌ) ಅವರು ಕವಿ, ನಾಟಕಕಾರ, ವಿಮರ್ಶಕ, ಸಂಶೋಧಕರು ಕೂಡ. ಯಾತ್ರೆ, ತೆಪ್ಪ, ಮೋಡ ಮುಸುಕಿದ ಆಕಾಶ, ನೆಲದ ಮರೆಯ ನಿಧಾನ, ಮಾತು ಮೌನಗಳ ನಡುವೆ, ಆರದಿರಲಿ ಈ ಬೆಳಕು, ಮಾತು ಮಾರ್ಗ, ನಿನ್ನೆ ನಾಳೆಗಳ ನಡುವೆ (ಸಮಗ್ರ) ಅವರ ಪ್ರಕಟಿತ ಕವನ ಸಂಕಲನಗಳು. ದೊರೆ ದುರ್ಯೋಧನ (ನಾಟಕ) ಮತ್ತು ಕುಮಾರ ರಾಮ, ಕಂದನ ಕವನಗಳು, ಆರು ಪ್ರಾಣಿಕಥೆಗಳು (ಮಕ್ಕಳ ಸಾಹಿತ್ಯ) ಕೃತಿಗಳನ್ನು ಪ್ರಕಟಿಸಿದ್ದಾರೆ.  ರಾಘವಾಂಕ, ಕಾವ್ಯಾನುಶೀಲನ, ಅವಗಾಹನ, ಕುವೆಂಪು ಸಾಹಿತ್ಯ ವಿಮರ್ಶನ, ದುರ್ಗಸಿಂಹ, ಪ್ರಾಸ್ತಾವಿಕ(ವಿಮರ್ಶೆ) , ಲಕ್ಷೀಶನ ಕಾವ್ಯ ಪ್ರವೇಶ, ರನ್ನನ ಕಾವ್ಯಾಧ್ಯಯನ (ಸಂಶೋಧನ ಕೃತಿಗಳು)   ಕೆ.ಎಸ್.ನರಸಿಂಹಸ್ವಾಮಿ (ಜೀವನ ಚರಿತ್ರೆ),  ಸಾಹಸ , ಭೀಮವಿಜಯ, ಅಜಿತತೀರ್ಥಂಕರ ಪುರಾಣ, ಲಕ್ಷ್ಮೀಶನ ಜೈಮಿನಿ ಭಾರತ (ಗ್ರಂಥಸಂಪಾದನೆ) ಮತ್ತು ನಮ್ಮ ಗಾದೆಗಳು, ಕಿಟ್ಟೆಲ್ ಕೋಶದ ಗಾದೆಗಳು, ಕರ್ಣಾಟಕದ ಜನಪದ ಕಥೆಗಳು, ನಮ್ಮ ...

READ MORE

Related Books