ರಾಮಾಚಾರಿಯ ನೆನಪು

Author : ಪು.ತಿ.ನ. (ಪು.ತಿ. ನರಸಿಂಹಾಚಾರ್ )

Pages 98

₹ 7.00




Year of Publication: 1992
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ
Address: ನೃಪತುಂಗ ರಸ್ತೆ, ಬೆಂಗಳೂರು- 560002

Synopsys

‘ರಾಮಾಚಾರಿಯ ನೆನಪು’ ಹಿರಿಯ ಸಾಹಿತಿ ಪು.ತಿ.ನರಸಿಂಹಾಚಾರ್ ಅವರ ಪ್ರಬಂಧ ಸಂಕಲನ.  ಮೊದನಲೆಯ ಪ್ರಬಂಧ ದೇಶೀಯ ವಿದ್ಯಾಶಾಲಾ ಪತ್ರಿಕೆಯ ಪ್ರಜೋತ್ಪತ್ತಿ ಸಂವತ್ಸರದ ಪ್ರಥಮ ಸಂಚಿಕೆಯಿಂದ ಈ ಪುಸ್ತಕದಲ್ಲಿ ಪುನರ್ಮುದ್ರಿತವಾಗಿದೆ. ಇಲ್ಲಿ ರಾಮಾಚಾರಿಯ ನೆನಪು, ನನಸಿಗಿಂತಲೂ ನಿಜವಾದ ಒಂದು ಕನಸು, ಕೃಷ್ಣಶಾಸ್ತ್ರೀಯ ತ್ಯಾಗ, ರಂಗರಾಯನು ಸಂಗೀತವನ್ನು ಕೇಳಿದುದು, ಮೂರ್ತಿಯ ಹುಡುಕಾಟ, ವೆಂಕೋಬರಾಯರು ಒಂದು ಪದ್ಯವನ್ನು ಓದಿ ವಿಮರ್ಶಿಸಿದ್ದು, ಹಹ್ಹಾ ಒಂದು ನಕ್ಷತ್ರ, ಹಾಗೂ ಶಿವನ ಕಣಸು ಎಂಬ 8 ಪ್ರಬಂಧಗಳಿವೆ.

 

About the Author

ಪು.ತಿ.ನ. (ಪು.ತಿ. ನರಸಿಂಹಾಚಾರ್ )
(17 March 1905 - 13 October 1998)

ಪುತಿನ ಎಂದು ಚಿರಪರಿಚಿತರಾಗಿದ್ದ ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಅವರು ಕನ್ನಡ ನವೋದಯ ಕವಿಗಳಲ್ಲಿ ಪ್ರಮುಖರು. ಮೇಲುಕೋಟೆಯಲ್ಲಿ 1905ರ ಮಾರ್ಚ್ 17ರಂದು ಜನಿಸಿದರು. ತಂದೆ ತಿರುನಾರಾಯಣ ಅಯ್ಯಂಗಾರ್, ತಾಯಿ ಶಾಂತಮ್ಮ.  ಬಾಲ್ಯದ ವಿದ್ಯಾಭ್ಯಾಸವನ್ನು ಮೇಲುಕೋಟೆ ಮತ್ತು ಮೈಸೂರಿನಲ್ಲಿ ಮುಗಿಸಿದ ನಂತರ ಬಿ.ಎ. ಪದವಿಯನ್ನು ಗಳಿಸಿದ ಮೇಲೆ ಗೋರಕ್ಷಕ ಸಮಿತಿಯಲ್ಲಿ ಗುಮಾಸ್ತರಾಗಿ ಕಾರ್ಯನಿರ್ವಹಿಸಿದರು. ಅನಂತರ ಸೈನ್ಯದ ಮುಖ್ಯಾಧಿಕಾರಿಗಳ ಕಚೇರಿಯಲ್ಲಿ ಕೆಲಸಕ್ಕೆ ಸೇರಿದರು. ಅದೇ ಕಚೇರಿಯಲ್ಲಿ 1938ರಲ್ಲಿ ವ್ಯವಸ್ಥಾಪಕರಾಗಿಯೂ 1945ರಲ್ಲಿ ಅಧೀಕ್ಷಕರಾಗಿಯೂ ಕೆಲಸ ಮಾಡಿದ್ದ ಅವರು ಅನಂತರ 1952ರಲ್ಲಿ ಶಾಸನ ಸಭಾ ಕಚೇರಿಯ ಸಂಪಾದಕರೂ ಆಗಿದ್ದರು. ಕನ್ನಡ ವಿಶ್ವಕೋಶದ ಕಚೇರಿಯಲ್ಲಿ ಭಾಷಾಂತರಕಾರ ...

READ MORE

Related Books