ರಮಣ ಹೃದಯ ಬೇಂದ್ರೆ ಅನುಭಾವ ಮೀಮಾಂಸೆ

Author : ಟಿ.ಎನ್. ವಾಸುದೇವ ಮೂರ್ತಿ

Pages 136

₹ 110.00




Year of Publication: 2017
Published by: ವಂಶಿ ಪಬ್ಲಿಕೇಷನ್ಸ್

Synopsys

ಕವಿ ಬೇಂದ್ರೆಯವರು ಆಧ್ಯಾತ್ಮ ಜೀವಿ. ಅರವಿಂದರು ಹಾಗೂ ಅವರ ಚಿಂತನೆಗಳ ಬಗ್ಗೆ ಅಪಾರ ಗೌರವ ಹೊಂದಿದ್ದ ಬೇಂದ್ರೆಯವರ ಕವಿತೆಯಲ್ಲಿ ಆಧ್ಯಾತ್ಮ ಒಂದು ಪ್ರಮುಖ ಪಾತ್ರ ವಹಿಸುತ್ತದೆ. ರಮಣ ಮಹರ್ಷಿಗಳ ತಾತ್ವಿಕತೆ ಹಾಗೂ ಬೇಂದ್ರೆಯವರ ಅನುಭಾವ ಮೀಮಾಂಸೆಯಲ್ಲಿ ಹೇಗೆ ಒಡಮೂಡಿದೆ ಎನ್ನುವ ಅಂಶವನ್ನು ವಾಸುದೇವಮೂರ್ತಿ ಈ ಕೃತಿಯಲ್ಲಿ ಮಾಡಿದ್ದಾರೆ.

About the Author

ಟಿ.ಎನ್. ವಾಸುದೇವ ಮೂರ್ತಿ
(30 December 1974)

ಟಿ.ಎನ್.ವಾಸುದೇವ ಮೂರ್ತಿ ಅವರು ಕಿ.ರಂ.ನಾಗರಾಜ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಅಲ್ಲಮ ಪ್ರಭುವಿನ ವಚನಗಳ ದಾರ್ಶನಿಕ ಮರುಚಿಂತನೆಯ ವಿಭಿನ್ನ ಸ್ವರೂಪಗಳು ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನದ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪ್ರಶಸ್ತಿ ಸಂದಿದೆ. ಬೆಂಗಳೂರು ವಿವಿಯಲ್ಲಿ ಕನ್ನಡ ಎಂ.ಎ (ತೌಲನಿಕ ಸಾಹಿತ್ಯ) ಪದವಿಯನ್ನು ಪಡೆದ ಮೇಲೆ ಬೆಂಗಳೂರಿನ ಹಲವು ಪ್ರಮುಖ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದರು. ನ್ಯಾಷನಲ್  ಕಾಲೇಜು, ಜೈನ್ ವಿಶ್ವವಿದ್ಯಾಲಯ ಕಾವ್ಯಮಂಡಲ ಮೊದಲಾದ ಕನ್ನಡ ಸ್ನಾತಕೋತ್ತರ ಕೇಂದ್ರಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಎಂ.ಎ. ಹಾಗೂ ಎಂ.ಫಿಲ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಓಶೋ ನೇರ ಶಿಷ್ಯರಾದ ಸ್ವಾಮಿ ಆನಂದ್ ಪ್ರಭಾವದಿಂದ ದೀಕ್ಷೆ ...

READ MORE

Related Books