ರಂಗ ಗೀತ- ತರಂಗ

Author : ಸಂಗಮೇಶ ತಮ್ಮನಗೌಡ್ರ

Pages 48

₹ 20.00




Year of Publication: 2004
Published by: ನೀಲಾ ಪ್ರಕಾಶನ
Address: ಗುಜಮಾಗಡಿ, ತಾ: ರೋಣ, ಜಿ: ಗದಗ-582 102
Phone: 9449074397

Synopsys

ಕನ್ನಡದ ಹೆಸರಾಂತ ನಾಟಕಗಳ ರಂಗ ಗೀತೆಗಳ ಸಂಗ್ರಹವಿದು. ಕವಿ ಸಂಗಮೇಶ ತಮ್ಮನಗೌಡ್ರ ಅವರು ಸಂಪಾದಿಸಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶಿಕ್ಷಣದಲ್ಲಿ ರಂಗ ಕಲೆ ಕುರಿತು ತಿಳಿಸುವ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ಮಾಡುವ ಅನುಭವದ ಹಿನ್ನೆಲೆಯಲ್ಲಿ ರಂಗ ಗೀತೆಗಳ ಕುರಿತು ಶಿಕ್ಷಕರಲ್ಲಿ ಹಾಗೂ ರಂಗ ಕಲಾಸಕ್ತರಲ್ಲಿ ಆಸಕ್ತಿ ಮೂಡಿಸಲು ಇಂತಹ ಕೃತಿ ರಚನೆಯ ಉದ್ದೇಶ ಹುಟ್ಟಿಕೊಂಡಿದ್ದೇ ಈ ಕೃತಿ ರಚನೆಗೆ ಕಾರಣ ಎಂದು ಲೇಖಕರು ಹೇಳಿದ್ದಾರೆ.

ಚಂದ್ರಶೇಖರ ಕಂಬಾರರ ಸಂಗ್ಯಾ-ಬಾಳ್ಯಾ, ಗಿರೀಶ್ ಕಾರ್ನಾಡರ ಹಯವದನ, ಶ್ರೀರಂಗರ ಹರಿಜನ್ವಾರ, ಕೀರ್ತಿನಾಥ ಕುರ್ತಕೋಟಿ ಅವರ ಸ್ವಪ್ನದರ್ಶಿ, ಬಿ.ಎಂ. ಶ್ರೀ ಅವರ ಅಶ್ವತ್ಥಾಮನ್, ಬಿ.ವಿ.ಕಾರಂತರ ಹೆಡ್ಡಾಯಣ, ವಿ. ವೆಂಕಟರಾಮಯ್ಯ ಅವರ ಪತಿತ ಪಾವನ ಹೀಗೆ ಒಟ್ಟು 47 ರಂಗ ಗೀತೆಗಳನ್ನು ಸಂಪಾದಿಸಲಾಗಿದೆ.

About the Author

ಸಂಗಮೇಶ ತಮ್ಮನಗೌಡ್ರ
(15 January 1970)

ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...

READ MORE

Related Books