ರಂಗವಿಲಾಸ ಬಂಗಲೆಯ ಕೊಲೆಗಳು

Author : ರವಿ ಬೆಳಗೆರೆ

Pages 100

₹ 90.00




Year of Publication: 2012
Published by: ಭಾವನಾ ಪ್ರಕಾಶನ
Address: ನಂ. 2, 80 ಫೀಟ್ ರಸ್ತೆ, ಕದಿರೇನಹಳ್ಳಿ ಪೆಟ್ರೋಲ್ ಪಂಪ್ ಹತ್ತಿರ, ಬನಶಂಕರಿ 2ನೇ ಹಂತ ಬೆಂಗಳೂರು-560070
Phone: 080 2679 0804

Synopsys

ಪತ್ರಕರ್ತ ಹಾಗೂ ಲೇಖಕ ರವಿ ಬೆಳಗೆರೆ ಅವರ ಕೃತಿ-ರಂಗವಿಲಾಸ ಬಂಗಲೆಯ ಕೊಲೆಗಳು. ಬೆಂಗಳೂರಿನ ಸಿಂಡಿಕೇಟ್ ಬ್ಯಾಂಕ್ ಪ್ರಧಾನ ಕಚೇರಿ ಸಮೀಪದ ಖ್ಯಾತ ನ್ಯಾಯವಾದಿ ಬೇಲೂರು ಶ್ರೀನಿವಾಸ ಅಯ್ಯಂಗಾರ್ ಮತ್ತು ಇತರೆ 5 ಜನರು ಹಾಗೂ ನಾಯಿಯ ಕೊಲೆ ಹೀಗೆ ದೇಶದಲ್ಲಿ ಸಂಚಲನ ಮೂಡಿಸಿದ 14 ಜನರ ಕೊಲೆಗಳ ಬಗ್ಗೆ ಮಾಹಿತಿ ಒಳಗೊಂಡ ಕೃತಿ ಇದು. ಕೊಲೆಯ ಸ್ವರೂಪ, ಕೊಲೆಗೆ ಕಾರಣ ಇಂತಹ ಭೀಕರ ಚಿತ್ರಣಗಳನ್ನು ಈ ಕೃತಿ ನೀಡುತ್ತದೆ.

About the Author

ರವಿ ಬೆಳಗೆರೆ
(15 March 1958 - 13 November 2020)

ಕನ್ನಡದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರಾದ ರವಿ ಬೆಳಗೆರೆ ಅವರು 15 ಮಾರ್ಚ್ 1958 ಬಳ್ಳಾರಿಯಲ್ಲಿ ಜನಿಸಿದರು. ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ., ಮಾಡಿದ್ದ ಇವರು ಮೊದಲು ಪ್ರಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಸಂಯುಕ್ತ ಕರ್ನಾಟಕ, ಕರ್ಮವೀರ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದರು. ಲಂಕೇಶ್ ಪತ್ರಿಕೆಯಲ್ಲಿ ನಿಯಮಿತವಾಗಿ ಬರೆಯುತ್ತಿದ್ದ ಅವರು ಆಮೇಲೆ ತಾವೇ ಸ್ವತಃ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದರು. ಹಾಯ್ ಬೆಂಗಳೂರ್ ವಾರಪತ್ರಿಕೆಯು ಓದುಗರ ಮನಗೆದ್ದು ಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಸಂಚಲನ ಮೂಡಿಸಿತು. ಹಾಯ್ ಬೆಂಗಳೂರು ಪತ್ರಿಕೆಯ ಜೊತೆಗೆ ಓ ಮನಸೇ ಪಾಕ್ಷಿಕ ಪ್ರಾರಂಭಿಸಿದರು. ಶಿವರಾಮ ಕಾರಂತ ...

READ MORE

Related Books