ರಂಗ ವೃತ್ತಾಂತ

Author : ಹೇಮಾ ಪಟ್ಟಣಶೆಟ್ಟಿ

Pages 172

₹ 150.00




Year of Publication: 2020
Published by: ಅನನ್ಯ ಪ್ರಕಾಶನ, ಧಾರವಾಡ
Address: ಹೂಮನೆ, ಶ್ರೀದೇವಿನಗರ, ವಿದ್ಯಾಗಿರಿ, ಧಾರವಾಡ-580004
Phone: 94488 61604

Synopsys

‘ರಂಗ ವೃತ್ತಾಂತ’ ಕವಿ ಹೇಮಾ ಪಟ್ಟಣಶೆಟ್ಟಿ ಅವರು ರಂಗಭೂಮಿ ಹಾಗೂ ನಾಟಕಗಳಿಗೆ ಸಂಬಂಧಿಸಿದ ಲೇಖನಗಳ ಸಂಕಲನ. ಕತೆ, ವಿಮರ್ಶೆ, ಅನುವಾದ, ನಾಟಕ ಪ್ರಕಾರಗಳಲ್ಲಿ ಗಮನಾರ್ಹ ಕೃತಿಗಳನ್ನು ರಚಿಸಿರುವ ಹೇಮಾ ಅವರ ಮತ್ತೊಂದು ಆಸಕ್ತಿಯ ಕ್ಷೇತ್ರ ರಂಗಭೂಮಿ.  ಧಾರವಾಡ ರಂಗಭೂಮಿಯ ಚರಿತ್ರೆ-ವರ್ತಮಾನದ ನಡತೆಗಳನ್ನು ದಾಖಲಿಸುವ ಲೇಖನಗಳ ಜೊತೆಯಲ್ಲಿಯೇ ಕಾವ್ಯ ಮತ್ತು ನಾಟಕದ ಸ್ವರೂಪ. ವೈಶಿಷ್ಟ್ಯ - ಭಿನ್ನತೆ- ಅನನ್ಯತೆಗಳನ್ನು ವ್ಯಾಖ್ಯಾನಿಸುವ ಮೀಮಾಂಸೆ ಮಾದರಿಯ ಬರಹಗಳು ಗಮನ ಸೆಳೆಯುತ್ತವೆ. ವೃತ್ತಿ ಮತ್ತು ಹವ್ಯಾಸಿ ರಂಗ ಕಲಾವಿದೆಯರ ಅಗೋಚರವಾದ ತೊಳಲಾಟ, ತಲ್ಲಣಗಳನ್ನು ಅನಾವರಣ ಗೊಳಿಸಿದ್ದಾರೆ. ಬೇಂದ್ರೆ ಕುವೆಂಪು, ಸರಸ್ವತಿಬಾಯಿ, ರಾಜವಾಡೆ ಅವರ ನಾಟಕಗಳ ವಿಶ್ಲೇಷಣಾತ್ಮಕ ವಿಮರ್ಶೆಯನ್ನೂ ಈ ಕೃತಿ ಒಳಗೊಂಡಿದೆ.

About the Author

ಹೇಮಾ ಪಟ್ಟಣಶೆಟ್ಟಿ
(10 February 1954)

  ಕವಯತ್ರಿ, ಬರಹಗಾರ್ತಿ ಹೇಮಾ ಪಟ್ಟಣಶೆಟ್ಟಿ ಅವರು ಮನೋವಿಜ್ಞಾನ ಹಾಗೂ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಬರೆದಿರುವ ಪ್ರಮುಖ ಕೃತಿಗಳೆಂದರೆ ವಿರಹೋತ್ಸವ, ಹೊಸಹಾಡು, ಕಣ್ಣುಗಳಲಿ ಕನಸು ತುಂಬಿ, ಮುಸುಕಿದೀ ಮಬ್ಬಿನಲಿ, ಬಗಾಟ ಬಗರಿ, ತುಂಟ ಮಕ್ಕಳ ತಂಟೆ, ಹೆಣ್ಣು. ವಿಮರ್ಶೆ/ವಿಚಾರ ಸಾಹಿತ್ಯ : ಮರ್ಯಾದೆಯ ಮುಸುಕಿನಲ್ಲಿ, ಅನುಲೇಖ ಮುಂತಾದವು. ಸಾಹಿತ್ಯ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆಗೆ ಅಂತರರಾಷ್ಟ್ರೀಯ ಮಹಿಳಾ ವರ್ಷದ ಪ್ರಶಸ್ತಿ, ರತ್ನಮ್ಮ ಹೆಗ್ಗಡೆ ಪ್ರಥಮ ಬಹುಮಾನ, ಮಲ್ಲಿಕಾ ಪ್ರಶಸ್ತಿ ಮುಂತಾದ ಹಲವಾರು ಪ್ರಶಸ್ತಿಗಳು ಸಂದಿವೆ.  ಅನನ್ಯ ಪ್ರಕಾಶನ ಸ್ಥಾಪಿಸಿ 90ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ...

READ MORE

Related Books