ರಾಷ್ಟ್ರಧರ್ಮನಿಷ್ಠ ಹರ್ಡೇಕರ ಮಂಜಪ್ಪ

Author : ಶಿವಾನಂದ ಯಲ್ಲಪ್ಪ ಗುಬ್ಬಣ್ಣವರ

₹ 60.00




Year of Publication: 1986
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಬೆಂಗಳೂರು-19.

Synopsys

ʼರಾಷ್ಟ್ರಧರ್ಮನಿಷ್ಠ ಹರ್ಡೇಕರ ಮಂಜಪ್ಪʼ ಜೀವನಚರಿತ್ರೆ ಕೃತಿಯನ್ನು ಲೇಖಕ ಶಿವಾನಂದ ಗುಬ್ಬಣ್ಣನವರ ಅವರು ರಚಿಸಿದ್ದಾರೆ. ಸಾಮಾಜಿಕ ಕಾರ್ಯಗಳನ್ನೂ ಲೇಖನ ಮತ್ತು ಪತ್ರಿಕಾ ವ್ಯವಸಾಯವನ್ನೂ ಆಸಾಧಾರಣ ನಿಷ್ಠೆಯಿಂದ, ಏಕಾಗ್ರತೆಯಿಂದ, ಅಸೀಮ ನಿಸ್ಪೃಹತೆಯಿಂದ ನಡೆಸಿ, ಸಾತ್ವಿಕ ಜೀವನದ ಆದರ್ಶವನ್ನು ಪ್ರಜ್ವಲವಾಗಿ ನಿದರ್ಶನಪಡಿಸಿದವರು ಹರ್ಡೇಕರ್ ಮಂಜಪ್ಪನವರು. ಎಲ್ಲರಿಗೂ ಸ್ಫೂರ್ತಿದಾಯಕವಾಗಿದ್ದು, ವಿಶೇಷವಾಗಿ ಸಾಮಾಜಿಕ ಕಾರ್ಯಕರ್ತರಿಗೆ ಪ್ರಬೋಧಕವಾಗಿದ್ದ ಮಂಜಪ್ಪನವರ ಜೀವನ, ಸಾಧನೆ ಕುರಿತ ಪರಿಚಯ ಈ ಗ್ರಂಥದಲ್ಲಿದೆ.

About the Author

ಶಿವಾನಂದ ಯಲ್ಲಪ್ಪ ಗುಬ್ಬಣ್ಣವರ
(01 January 1946 - 25 July 2020)

ಲೇಖಕ, ಪ್ರಾಧ್ಯಾಪಕ ಶಿವಾನಂದ ಯಲ್ಲಪ್ಪ ಗುಬ್ಬಣ್ಣವರ ಅವರು ಮೂಲತಃ ಕುಂದಗೋಳ ತಾಲ್ಲೂಕು ಹಿರೇನರ್ತಿ ಗ್ರಾಮದವರು. ಹುಟ್ಟಿದ್ದು 1946 ಜನವರಿ 01. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಾಲುಮತ ಸಮಾಜ ಸಂಸ್ಕೃತಿ ಚರಿತ್ರೆಯನ್ನು ನಿರೂಪಿಸುವ ಮೌಖಿಕ ರೂಪದ ಡೊಳ್ಳಿನ ಹಾಡುಗಳನ್ನು ಜನಪದರಿಂದ ಸಂಗ್ರಹಿಸಿ ಅವರು "ದೇವರ್ ಬಂದಾವ್ ಬನ್ನಿರೇ" ಶೀರ್ಷಿಕೆಯಡಿ ಎರಡು ಸಂಪುಟದಲ್ಲಿ ಪ್ರಕಟಿಸಿದ್ದರು. ಈ ಕೃತಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ ಸಂದಿದ್ದು ಬರಕೋ ಪದ ಬರಕೊ (ಸಂಪಾದನೆ), ರಾಮೋಜೋಯಿಸರ ಕಾಳಗ, ಶಿಶುನಾಳ ಶರೀಫರ ಪದಗಳು (410 ಹಾಡುಗಳಸಂಗ್ರಹ) - ಅವರ ...

READ MORE

Related Books