ರಾಷ್ಟ್ರನಾಯಕ ಡಾ. ಅಂಬೇಡ್ಕರ್

Author : ಚಂದ್ರಶೇಖರ ಭಂಡಾರಿ

Pages 40

₹ 10.00




Year of Publication: 2006
Published by: ಸಾಹಿತ್ಯ ಸಿಂಧು ಪ್ರಕಾಶನ
Address: ಬೆಂಗಳೂರು-19.

Synopsys

ರಾಷ್ಟ್ರನಾಯಕ ಡಾ ಅಂಬೇಡ್ಕರ್ ಜೀವನಚರಿತ್ರೆ ಕೃತಿಯನ್ನು ಲೇಖಕ ಚಂದ್ರಶೇಖರ ಭಂಡಾರಿ ಅವರು ರಚಿಸಿದ್ದಾರೆ. ಈ ಪುಸ್ತಕದಲ್ಲಿ ಸ್ವತಂತ್ರ ಭಾರತದ ಸಂವಿಧಾನ ಶಿಲ್ಪಿಯಾಗಿದ್ದ ಡಾ|| ಬಾಬಾಸಾಹೇಬ ಅಂಬೇಡ್ಕರರ ಜನ್ಮ ಶತಮಾನೋತ್ಸವದ ವರ್ಷ (೨೦೦೬)ದಲ್ಲಿ ಹೊರತಂದ ಕೃತಿ ಇದು. ಡಾ|| ಅಂಬೇಡ್ಕರರನ್ನು ಅವರು ಹುಟ್ಟಿದ ಕುಲ ಮತ್ತು ಅವರು ಹೆಚ್ಚಿನ ಮಹತ್ತ್ವ ನೀಡಿ ಕೈಗೊಂಡ ಅಸ್ಪೃಶ್ಯತೆ ವಿರುದ್ಧ ಹೋರಾಟ – ಇವುಗಳಿಂದ ಮಾತ್ರ ಅಳೆಯುವುದು ಸರಿಯಲ್ಲ. ಅವರು ಸಮಾಜದ ಯಾವುದೋ ಒಂದು ವರ್ಗದ ನಾಯಕರಾಗಿದ್ದರು ಎನ್ನುವುದು ಅವರ ವ್ಯಕ್ತಿತ್ವದ ಬಿಂಬವಾಗಲಾರದು. ತತ್ಕಾಲೀನ ವಿವಿಧ ಸಾಮಾಜಿಕ, ರಾಜಕೀಯ ಸನ್ನಿವೇಶಗಳಿಂದ ಅವರನ್ನು ಪ್ರತ್ಯೇಕಗೊಳಿಸದೇ ಅವುಗಳನ್ನೇ ಹಿನ್ನೆಲೆಯಾಗಿರಿಸಿ ಅವರ ಬಗ್ಗೆ ಮಾಡಲಾಗುವ ಅಧ್ಯಯನ ವಾಸ್ತವಿಕತೆಗೆ ಹೆಚ್ಚು ಸಮೀಪ. ಮೇಲ್ನೋಟಕ್ಕೆ ಅವರು ಒಂದು ವರ್ಗದ ಹಿತಕ್ಕಾಗಿ ಹೋರಾಡಿರುವಂತೆ ಕಂಡರೂ, ಸಮಕಾಲೀನ ಮಿಕ್ಕ ಎಲ್ಲ ಸಾಮಾಜಿಕ, ರಾಜಕೀಯ ಮುಖಂಡರುಗಳಿಗಿಂತ ಭಿನ್ನವಾದ ಮತ್ತು ಹೆಚ್ಚಿನ ಹೊಣೆ ಅಂಬೇಡ್ಕರರ ಮೇಲಿತ್ತು. ಅವರು ಕೈಗೊಂಡ ಪ್ರತಿಯೊಂದು ನಿರ್ಣಯದಲ್ಲೂ ಒಟ್ಟು ದೇಶದ ಮತ್ತು ಸಮಾಜದ ಹಿತಕ್ಕೇ ಆದ್ಯತೆಯಿದ್ದುದನ್ನು ಅಂದಿನ ಸನ್ನಿವೇಶಗಳ ವಿವಿಧ ಆಯಾಮಗಳ ಹಿನ್ನೆಲೆಯಲ್ಲಿ ಈ ಪುಸ್ತಕದಲ್ಲಿ ವಿವರಿಸಲಾಗಿದೆ.

About the Author

ಚಂದ್ರಶೇಖರ ಭಂಡಾರಿ

ಲೇಖಕ ಚಂದ್ರಶೇಖರ ಭಂಡಾರಿ ಅವರನ್ನು ‘ಸ್ಟಾಲ್‌ ಆಫ್‌ ದಿ ಅರ್ತ್‌’ ಎಂದು ಕೂಡ ಕರೆಯುತ್ತಾರೆ. ಅನೇಕ ಸಮಾಜದ ಏಳಿಗೆಗಾಗಿ ಕೃತಿಗಳನ್ನು ರಚಿಸಿದ ಇವರಿಗೆ ಕುವೆಂಪು ಭಾಷಾ ಪ್ರಾಧಿಕಾರದ ಪುಸ್ತಕ ಬಹುಮಾನ (2011ರಲ್ಲಿ) ಲಭಿಸಿದೆ. ಕೃತಿಗಳು; ಕುಟುಂಬ- ಒಂದು ಚಿಂತನೆ. ಜನಮನ ಶಿಲ್ಪಿ, ರಾಷ್ಟ್ರನಾಯಕ ಡಾ. ಅಂಬೇಡ್ಕರ್, ನಾನಾನಿಂದ ನೇತಾಜಿವರೆಗೆ ಸ್ವಾತಂತ್ಯ್ರ ಸಂಗ್ರಾಮ 1857-1957.ಪ್ರಕ್ಷುಬ್ಧ ಕಾಶ್ಮೀರ  ...

READ MORE

Related Books