ರೆಕ್ಕೆ ಮೂಡಿದಾಗ

Author : ಬಸವರಾಜ ಸಬರದ

Pages 78

₹ 20.00




Year of Publication: 1992
Published by: ಗ್ರಿನೋಬಲ್ ಪ್ರಕಾಶನ
Address: ಗುಲಬರ್ಗಾ

Synopsys

‘ರೆಕ್ಕೆ ಮೂಡಿದಾಗ’ ಲೇಖಕ ಬಸವರಾಜ ಸಬರದ ಅವರು ರಚಿಸಿದ ನಾಟಕ. ಈ ಕೃತಿಗೆ ಗ್ರಿನೋಬಲ್ ಪ್ರಕಾಶನದ ಮುಖ್ಯಸ್ಥರಾದ ರಾಜೇಂದ್ರ ಪಾಟೀಲ ಅವರ ಆರಂಭಿಕ ಮಾತುಗಳಿವೆ. ಕೃತಿ ಮತ್ತು ಕೃತಿಕಾರರ ಕುರಿತು ಬರೆಯುತ್ತಾ ಡಾ. ಬಸವರಾಜ ಸಬರದ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಈಗ ಗಮನಾರ್ಹವಾದ ಹೆಸರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ, ಕರ್ನಾಟಕ ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ರಾಜ್ಯ ಸಂಚಾಲಕರಾಗಿ ಅವರು ಕಾರ್ಯ ನಿರ್ವಹಿಸಿದ್ದಾರೆ. ಕಾವ್ಯ, ವಿಮರ್ಶೆ ಕ್ಷೇತ್ರಗಳಲ್ಲಿ ಈಗಾಗಲೇ ಗಮನಾರ್ಹ ಕೃತಿಗಳನ್ನು ನೀಡಿದ ಡಾ. ಸಬರದವರು ಈಗ ನಾಟಕ ಕ್ಷೇತ್ರದಲ್ಲಿ ಮುನ್ನಡೆಯುತ್ತಿರುವುದು ಅಭಿಮಾನದ ಸಂಕೇತವಾಗಿದೆ ಎಂದಿದ್ದಾರೆ. ಜೊತೆಗೆ 1978 ರಲ್ಲಿ ಪ್ರಕಟವಾದ ಡಾ. ಸಬರದ ಅವರ ಪ್ರಥಮ ನಾಟಕ ಪ್ರತಿರೂಪ ಅನೇಕ ಪ್ರಯೋಗಗಳನ್ನು ಕಂಡಿರುವುದನ್ನು ಇಲ್ಲಿ ನೆನಪಿಸಬಹುದು, ಹದಿನಾಲ್ಕು ವರುಷಗಳ ನಂತರ ಡಾ.ಸಬರದ ಅವರ ಎರಡು ನಾಟಕಗಳನ್ನು ನಮ್ಮ ಪ್ರಕಾಶನದಿಂದ ಪ್ರಕಟಿಸಲು ತುಂಬಾ ಸಂತೋಷವೆನಿಸುತ್ತದೆ ಎಂದಿದ್ದಾರೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books