ಋಗ್ವೇದದಲ್ಲಿ ಕ್ರಾಂತದೃಷ್ಟಿ: ಸಪ್ತರಶ್ಮಿ-ಸಪ್ತಸಿಂಧು ದರ್ಶನ

Author : ವಿ.ಕೃ. ಗೋಕಾಕ (ವಿನಾಯಕ)

Pages 30




Year of Publication: 1979
Published by: ಬೆಂಗಳೂರು ವಿಶ್ವವಿದ್ಯಾಲಯ
Address: ಬೆಂಗಳೂರು

Synopsys

‘ಋಗ್ವೇದದಲ್ಲಿ ಕ್ರಾಂತದೃಷ್ಟಿ: ಸಪ್ತರಶ್ಮಿ-ಸಪ್ತ ಸಿಂಧು ದರ್ಶನ’ ಕೃತಿಯನ್ನು ಕವಿ-ಸಾಹಿತಿ-ವಿಮರ್ಶಕ ವಿ.ಕೃ.ಗೋಕಾಕ್ (ವಿನಾಯಕ) ಅವರು ರಚಿಸಿದ್ದು, ಬೆಂಗಳೂರು ವಿಶ್ವವಿದ್ಯಾಲಯದ ‘ಮಾಸ್ತಿ ರಾಮಸ್ವಾಮಿ ತಿರುಮಲಮ್ಮ’ ದತ್ತಿ ಭಾಷಣ ಮಾಲೆಯಡಿ ಋಗ್ವೇದದ ಕೆಲ ಮುಖಗಳನ್ನು ಕುರಿತು ಅವರು ಮಾಡಿರುವ ಉಪನ್ಯಾಸವನ್ನು ಇಲ್ಲಿ ನೀಡಲಾಗಿದೆ. ವಿಷಯ ವಸ್ತು ಸಮೃದ್ಧವಾಗಿದೆ. ಹತ್ತು ಹಲವು ಸಂಶೋಧನಾತ್ಮಕ ಅಧ್ಯಯನಗಳಿಗೆ ಪ್ರೇರಣೆ ನೀಡುತ್ತದೆ.

About the Author

ವಿ.ಕೃ. ಗೋಕಾಕ (ವಿನಾಯಕ)
(09 August 1909 - 28 April 1992)

‘ವಿನಾಯಕ’ ಕಾವ್ಯನಾಮದಿಂದ ಕೃತಿಗಳ ರಚನೆ ಮಾಡಿರುವ ವಿನಾಯಕ ಕೃಷ್ಣ ಗೋಕಾಕ್ ಅವರು ಇಂಗ್ಲಿಷ್ ಮತ್ತು ಕನ್ನಡ ಸಾಹಿತ್ಯದಲ್ಲಿ ದೊಡ್ಡ ಹೆಸರು. ಕರ್ನಾಟಕದಿಂದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದ ಮೊದಲ ವ್ಯಕ್ತಿ ಗೋಕಾಕ್ ಅವರು. ಭಾರತದಲ್ಲಿಯೇ ಅತ್ಯಂತ ಪ್ರತಿಷ್ಠಿತ ಲೇಖಕ-ಸಾಹಿತಿ ಅವರಾಗಿದ್ದರು. ಧಾರವಾಡ ಜಿಲ್ಲೆಯ (ಈಗಿನ ಹಾವೇರಿ) ಸವಣೂರಿನಲ್ಲಿ 1909ರ ಆಗಸ್ಟ್ 9ರಂದು ಜನಿಸಿದರು. ತಂದೆ ಕೃಷ್ಣರಾಯ ತಾಯಿ ಸುಂದರಮ್ಮ. ಸವಣೂರಿನಲ್ಲಿ ಶಾಲಾ ವಿದ್ಯಾಭ್ಯಾಸ ಮುಗಿಸಿ ಧಾರವಾಡದಲ್ಲಿ ಕರ್ನಾಟಕ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು. ಪುಣೆಯ ಫರ್ಗ್ಯೂಸನ್  ಕಾಲೇಜಿನಲ್ಲಿ ಅನಂತರ ಆಕ್ಸ್‍ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ಉನ್ನತ ...

READ MORE

Related Books