ಸಾಧನ ಕುಟೀರ

Author : ಭಾರತೀಸುತ (ಶಾನಭಾಗ ರಾಮಯ್ಯ ನಾರಾಯಣರಾವ್)

Pages 198

₹ 1.00




Year of Publication: 1940
Published by: ಯ.ಗು. ಕುಲಕರ್ಣಿ
Address: ಶ್ರೀ ಶೇಷಾಚಲ ಪ್ರೆಸ್ , ಆನಂದವನ (ಆಗಡಿ) ಹಾವೇರಿ

Synopsys

ಖ್ಯಾತ ಕಾದಂಬರಿಕಾರ ಭಾರತೀಸುತ ಅವರು ಬರೆದ ಸಾಮಾಜಿಕ ಕಾದಂಬರಿ `ಸಾಧನ-ಕಟೀರ'. ಭಾರತೀಯ ಪರಂಪರೆಗೆ ಸೀಮಿತಗೊಳಿಸಿ ಹೇಳುವುದಾದರೆ ಭಾರತವು ಪಾರಮಾರ್ಥವನ್ನು ಭೌತಿಕವಾದಕ್ಕಿಂತಲೂ ಹೆಚ್ಚಾಗಿ ವಿಜೃಂಭಿಸುತ್ತದೆ. ಆದ್ದರಿಂದ, ತಾಯಿ ನಾಡು ಸೇವೆಯಲ್ಲೂ ಪಾರಮಾರ್ಥವನ್ನು ಕಾಣುತ್ತದೆ. ಇವರೆಡರ ಸಂಗಮವಾಗಿ ಕಾದಂಬರಿಯು ಸಾಗುತ್ತದೆ. ಅಧ್ಯಾತ್ಮ ವಿಚಾರಗಳು ಬಂದರೆ ಈ ಕೃತಿಯು ಪಾರಮಾರ್ಥಿಕವಾಗದು ಎಂದು ಲೇಖಕರು ಸ್ಪಷ್ಟಪಡಿಸಿದ್ದಾರೆ.

About the Author

ಭಾರತೀಸುತ (ಶಾನಭಾಗ ರಾಮಯ್ಯ ನಾರಾಯಣರಾವ್)
(15 May 1915 - 04 April 1976)

ಕೊಡಗು ಜಿಲ್ಲೆಯ ಬಿಳಿಗೇರಿಯಲ್ಲಿ ಜನಿಸಿದ ಶಾನಭಾಗ ರಾಮಯ್ಯ ನಾರಾಯಣರಾವ್ ಅವರು 'ಭಾರತೀಸುತ' ಎಂಬ ಹೆಸರಿನಲ್ಲಿ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ರಾಷ್ಟ್ರೀಯ ಚಳವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆ ವಾಸ ಅನುಭವಿಸಿದ್ದ ಅವರು ಬಿಡುಗಡೆಯ ನಂತರ ಕಾದಂಬರಿ- ಸಾಹಿತ್ಯ ರಚನೆ ಆರಂಭಿಸಿದರು. ಪತ್ರಿಕೋದ್ಯಮದಲ್ಲಿ ಆಸಕ್ತರಾಗಿದ್ದ ಅವರು ಕೆಲಕಾಲ 'ರಾಷ್ಟಬಂಧು' ಮತ್ತು 'ಗುರುವಾಣಿ' ಎಂಬ ಪತ್ರಿಕೆ ನಡೆಸಿದರು. ನಂತರ ಶಿಕ್ಷಕ ವೃತ್ತಿ ಆರಂಭಿಸಿದ ಅವರು ಕಥೆ-ಕಾದಂಬರಿಗಳ ರಚನೆಯಲ್ಲಿ ತೊಡಗಿಸಿಕೊಂಡರು. ಅವರು ರಚಿಸಿದ ’ಎಡಕಲ್ಲು ಗುಡ್ಡದ ಮೇಲೆ’, ’ಹುಲಿಯ ಹಾಲಿನ ಮೇವು’, ’ಗಿರಿಕನ್ನಿಕೆ’, ’ಬಯಲುದಾರಿ’ ಕಾದಂಬರಿಗಳು ಚಲಚಿತ್ರಗಳಾಗಿ ಯಶಸ್ವಿಯಾದವು.  ಸಂತಾನಭಿಕ್ಷೆ ಇಳಿದು ಬಾ ತಾಯಿ, ಬೆಂಕಿಯ ಮಳೆ, ವಕ್ರ ರೇಖೆ, ಸಾಧನ ಕುಟೀರ, ಹುಲಿಬೋನು, ಗಿಳಿಯು ಪಂಜರದೊಳಿಲ್ಲ, ...

READ MORE

Related Books