ಸಾಹಿತಿ ಸಜ್ಜನ ಸಾರ್ವಜನಿಕರು (ಜ್ಞಾಪಕ ಚಿತ್ರಶಾಲೆ-1)

Author : ಡಿ.ವಿ. ಗುಂಡಪ್ಪ (ಡಿ.ವಿ.ಜಿ.)

Pages 176

₹ 144.00

Buy Now


Year of Publication: 2018
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020

Synopsys

ಸಾಹಿತಿ ಸಜ್ಜನ ಸಾರ್ವಜನಿಕರು-ಈ ಕೃತಿ ರಚಿಸಿದ್ದು ಡಿ.ವಿ.ಜಿ. ಸಂಸ್ಕೃತಿ, ಮೌಲ್ಯ, ಅಧ್ಯಾತ್ಮ, ತಾತ್ವಿಕ ಚಿಂತನೆ, ಜೀವನದರ್ಶನಗಳನ್ನು ಮಾಡಿಸಿದ ಡಿ.ವಿ.ಜಿ ಅವರು ಕನ್ನಡ ನಾಡು-ನುಡಿಯ ಸೇವೆ ಮಾಡಿದ ಮಹನೀಯರನ್ನು ಪರಿಚಯಿಸುವ ಮೂಲಕ ಕನ್ನಡ ಸಾಹಿತ್ಯಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ. ವ್ಯಕ್ತಿಗತ ಜೀವನವನ್ನೂ ಮೀರಿದ ಈ ಸಾಧಕರು ಕನ್ನಡ-ನಾಡು-ನುಡಿಗೋಸ್ಕರ ಹಗಲಿರುಳು ದುಡಿದವರು. ಈ ಎಲ್ಲ ಮಹನೀಯರು ಕನ್ನಡಿಗರಿಗೆ ಅಭಿಮಾನದ ಮಾದರಿಗಳು. ತುಂಬಾ ಸುಂದರವಾಗಿ ವ್ಯಕ್ತಿ ಚಿತ್ರಣಗಳನ್ನು ನೀಡುವ ಮೂಲಕ ಡಿ.ವಿ.ಜಿ. ಅವರು ಕನ್ನಡ ಸಾಹಿತ್ಯ್ಕೆ ಉತ್ತಮ ಕೃತಿಯನ್ನು ಸೇರ್ಪಡೆಗೊಳಿಸಿದ್ದಾರೆ.

About the Author

ಡಿ.ವಿ. ಗುಂಡಪ್ಪ (ಡಿ.ವಿ.ಜಿ.)
(17 March 1887 - 07 October 1975)

ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 1887ರ ಮಾರ್ಚ್ 17ರಂದು ಜನಿಸಿದ ಗುಂಡಪ್ಪ ಅವರು ಪ್ರೌಢಾಶಾಲಾ ಶಿಕ್ಷಣವನ್ನು ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ಪಡೆದರು. ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸ್ವಂತ ಅಧ್ಯಯನದಿಂದ ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದರು. ಮುಳುಬಾಗಿಲಿನ ಒಂದು ಶಾಲೆಯಲ್ಲಿ ಕೆಲವು ಕಾಲ ಬದಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅನಂತರ ಕೋಲಾರದ ಸೋಡಾ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿ ಬೇಸತ್ತು ಬೆಂಗಳೂರಿನಲ್ಲಿ ಜಟಕಾಬಂಡಿಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಕಾಲ ಕೆಲಸ ಮಾಡಿದರು. ಅನಂತರ ಪತ್ರಿಕಾರಂಗ ...

READ MORE

Related Books