ಸಾಹಿತ್ಯ ವಿಮರ್ಶೆ ಮತ್ತು ವಸಾಹತೋತ್ತರ ಚಿಂತನೆ

Author : ಸಿ.ಎನ್. ರಾಮಚಂದ್ರನ್

Pages 336

₹ 250.00




Year of Publication: 2013
Published by: ಅಂಕಿತ ಪುಸ್ತಕ
Address: ಪ್ರಕಾಶಕರು : ಅಂಕಿತ ಪುಸ್ತಕ, #53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004.
Phone: 080 - 2661 7100 / 2661 7755

Synopsys

‘ಸಾಹಿತ್ಯ ವಿಮರ್ಶೆ ಮತ್ತು ವಸಾಹತೋತ್ತರ ಚಿಂತನೆ’ ಕೃತಿಯು ಸಿ.ಎನ್. ರಾಮಚಂದ್ರನ್ ಅವರ ಆಧುನಿಕ ವಿಮರ್ಶಾ ಪ್ರಸ್ಥಾನಗಳು ಮತ್ತು ವಸಾಹತೋತ್ತರ ಚಿಂತನೆ ಬರಹಗಳನ್ನು ಒಳಗೊಂಡಿದೆ. ಶ್ರೇಷ್ಠ ವಿಮರ್ಶೆಯ ಪರಂಪರೆ ಇರುವ ಕನ್ನಡದಲ್ಲಿ, ವಿಮರ್ಶೆಯ ತತ್ವ ಮತ್ತು ಸಿದ್ಧಾಂತಗಳಿಗೆ ಸಂಬಂಧಿಸಿದ ಗ್ರಂಥಗಳು ವಿರಳವೆಂದೇ ಹೇಳಬೇಕು. ಹೀಗಾಗಿ ಕನ್ನಡ ವಿಮರ್ಶೆಯ ಪ್ರಪಂಚದಲ್ಲಿ ಸಾಕಷ್ಟು ಕೃಷಿ ಮಾಡಿರುವ ಡಾ. ಸಿ.ಎನ್. ರಾಮಚಂದ್ರನ್ ಬರೆದಿರುವ ವಿಮರ್ಶೆಯ ತತ್ವ ಮತ್ತು ಆಧುನಿಕ ವಿಮರ್ಶಾ ಪ್ರಸ್ಥಾನಗಳಿಗೆ ಸಂಬಂಧಿಸಿದ ಈ ಅಮೂಲ್ಯ ಗ್ರಂಥವು ತುಂಬ ಪ್ರಸ್ತುತವಾಗಿದೆ.

About the Author

ಸಿ.ಎನ್. ರಾಮಚಂದ್ರನ್

ರಾಮಚಂದ್ರನ್ ಅವರು ಜನಿಸಿದ್ದು (ಜ ೧೯೩೬) ಮೈಸೂರು ಜಿಲ್ಲೆಯ ಚಿಲ್ಕುಂದ ಗ್ರಾಮದಲ್ಲಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ, ಅಮೆರಿಕೆಯ ಮಯಾಮಿ ವಿಶ್ವವಿದ್ಯಾಲಯದಿಂದ ಪಿಎಚ್. ಡಿ. ಪದವಿ. ಕರ್ನಾಟಕ, ಮಹಾರಾಷ್ಟ್ರ, ಅಮೆರಿಕ, ಸೌದಿ ಅರೇಬಿಯಾ, ಸೋಮಾಲಿಯಾಗಳಲ್ಲಿ ಅಧ್ಯಾಪಕರಾಗಿ ಕಾರ್‍ಯ ನಿರ್ವಹಿಸಿದ್ದಾರೆ. ೧೯೯೬ರಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಅಧ್ಯಾಪಕರಾಗಿ ನಿವೃತ್ತಿ. ಸಾಹಿತ್ಯ ವಿಮರ್ಶೆ, ವಸಾಹತೋತ್ತರ ಚಿಂತನೆ, ತೌಲನಿಕ ಸಾಹಿತ್ಯ, ಪರಂಪರೆ ಪ್ರತಿರೋಧ, ಎಡ್ವರ್ಡ್ ಸೈದ್, ಬಯಲುರೂಪ, ರಕ್ತ-ರೂಪಣೆ, ಹೊಸ ಮಡಿಯ ಮೇಲೆ ಚದುರಂಗ, ಗಿರೀಶ ಕಾರ್ನಾಡರ ಚಾರಿತ್ರಿಕ ನಾಟಕಗಳು ವಿಮರ್ಶಾ ಕೃತಿಗಳು. ಶೋಧ ಕಾದಂಬರಿ, ಕಸಾಂದ್ರ ಕಥಾ ಸಂಕಲನ. ಇನಾಂದಾರ್ ಪ್ರಶಸ್ತಿ, ...

READ MORE

Related Books