ಸಾಮಾನ್ಯನಿಗೆ ಸಾಹಿತ್ಯ ಚರಿತ್ರೆ-10 ಸಂಪುಟಗಳು

Author : ಜಿ.ಎಸ್. ಶಿವರುದ್ರಪ್ಪ

Pages 2147

₹ 1350.00

Buy Now


Year of Publication: 2013
Published by: ಸಪ್ನ ಬುಕ್ ಹೌಸ್
Address: ಆರ್.ಓ. #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9

Synopsys

ಕವಿ ಜಿ.ಎಸ್. ಶಿವರುದ್ರಪ್ಪನವರು ವಿವಿಧ ವಿಷಯಗಳು ಕುರಿತಂತೆ ಕಾಲಕಾಲಕ್ಕೆ ಬರೆದ 10 ಕೃತಿಗಳ ಕೃತಿಗಳ ಬೃಹತ್ ಸಂಪುಟವಿದು. ಕನ್ನಡ ಸಾಹಿತ್ಯ ಸಮೀಕ್ಷೆ, ಶಾಸನ ಮತ್ತು ಗದ್ಯ, ಷಟ್ಪದಿ ಸಾಹಿತ್ಯ, ಚಂಪೂ ಕವಿಗಳು, ಕೀರ್ತನಕಾರರು, ಸಾಂಗತ್ಯ ಕವಿಗಳು, ತ್ರಿಪದಿ ರಗಳೆ ಮತ್ತು ಜನಪದ ಸಾಹಿತ್ಯ, ಹೊಸಗನ್ನಡ ಸಾಹಿತ್ಯ ಚರಿತ್ರೆ, ಶಾಸ್ತ್ರಸಾಹಿತ್ಯ ಹೀಗೆ 10 ಸಂಪುಟಗಳನ್ನು ಸಂಗ್ರಹಿಸಿದ್ದು, ವಿವಿಧ ವಿಷಯಗಳ ಜ್ಞಾನವನ್ನು ಒಂದೇ ಗ್ರಂಥದಲ್ಲಿ ಕಟ್ಟಿಕೊಟ್ಟ ಕೃತಿ ಇದು.

About the Author

ಜಿ.ಎಸ್. ಶಿವರುದ್ರಪ್ಪ
(07 February 1926 - 23 December 2013)

ಸಮನ್ವಯ ಕವಿಗಳಲ್ಲಿ ಒಬ್ಬರು ಎಂದು ಗುರುತಿಸಲಾಗುವ ಡಾ.ಜಿ.ಎಸ್. ಶಿವರುದ್ರಪ್ಪ ಅವರು ವಿಮರ್ಶಕರಾಗಿಯೂ ಗಣನೀಯ ಸಾಧನೆ ಮಾಡಿದ್ದಾರೆ. ಗದ್ಯ-ಪದ್ಯಗಳೆರಡರಲ್ಲಿಯೂ ಮಾಗಿದ ಪ್ರತಿಭೆ ಅವರದು. ತಂದೆ ಗುಗ್ಗುರಿ ಶಾಂತವೀರಪ್ಪ ಮತ್ತು ತಾಯಿ ವೀರಮ್ಮ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ 1926ರ ಫೆಬ್ರುವರಿ 7ರಂದು ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್ ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದ ಕಾರಣದಿಂದ ಸರಕಾರಿ ನೌಕರಿ ಹಿಡಿಯಬೇಕಾಯಿತು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಸೇರಿದರು. ಆದರೆ ಓದಲೇಬೇಕೆಂಬ ಅದಮ್ಯ ಆಸೆಯಿಂದ ಕೆಲಸಕ್ಕೆ ವಿದಾಯ ಹೇಳಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದನ್ನು ಮುಂದುವರೆಸಿ ಬಿ.ಎ. ಪದವಿ (1949), ಸ್ವರ್ಣಪದಕದೊಂದಿಗೆ ...

READ MORE

Related Books