ಸಾವಿನ ಸೆರಗಿನಲ್ಲಿ

Author : ಡಿ.ವಿ. ಗುರುಪ್ರಸಾದ್

Pages 204

₹ 200.00




Year of Publication: 2019
Published by: ಮನೋಹರ ಗ್ರಂಥ ಮಾಲಾ
Address: ಲಕ್ಷ್ಮೀ ಭವನ, ಸುಭಾಷ್ ರೋಡ್, ಧಾರವಾಡ-580001
Phone: 9845447002

Synopsys

’ಸಾವಿನ ಸೆರಗಿನಲ್ಲಿ’ ನಿವೃತ್ತ ಐಪಿಎಸ್‌ ಅಧಿಕಾರಿ ಡಿ.ವಿ. ಗುರುಪ್ರಸಾದ್‌ ಅವರ ಹೊಸ ಕೃತಿ. ಗುರುಪ್ರಸಾದ್ ಅವರ ಸಾಹಿತ್ಯ-ಬರವಣಿಗೆ ಮೇಲಿನ ಪ್ರೀತಿ ಕನ್ನಡಿಗರಿಗೆ ಹೊಸದೇನಲ್ಲ. ವೃತ್ತಿಯಲ್ಲಿ ಇದ್ದ ದಿನಗಳಲ್ಲಿಯೇ ಅವರು ಹಲವು ಕೃತಿಗಳನ್ನು ಪ್ರಕಟಿಸಿದ್ದರು. ಪತ್ರಸಾಹಿತ್ಯಕ್ಕೆ ಸಂಬಂಧಿಸಿದಂತೆ ಅವರು ಅಧ್ಯಯನ ನಡೆಸಿ ಪಿಎಚ್‌.ಡಿ. ಪಡೆದಿದ್ದಾರೆ. ’ಸಾವಿನ ಸೆರಗಿನಲ್ಲಿ’ ಕುತೂಹಲ ಹುಟ್ಟಿಸುವ ಕೃತಿ. ಸಾವು ಹುಟ್ಟು ಹಾಕುವ ಆತಂಕ, ತಳಮಳವನ್ನು ದಾಖಲಿಸುವ ಕೃತಿ. ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಯನ್ನು ಜೈಲಿನಲ್ಲಿ ಸಂದರ್ಶನ ಮಾಡಿದ್ದದಾರೆ. ಲೇಖಕರು ಅಪರಾಧಿಗಳ ಮನಸ್ಸಿನಲ್ಲಿ ನಡೆಯುತ್ತಿದ್ದ ತುಮುಲವನ್ನು ದಾಖಲಿಸಿದ್ದಾರೆ. ಸಾವಿನ ಬಾಗಿಲಲ್ಲಿ ನಿಂತ ವ್ಯಕ್ತಿಯ ಮನಸ್ಥಿತಿಯನ್ನು ಹಿಡಿದಿಡುವ 14 ನೈಜ ಕತೆಗಳು ಈ ಕೃತಿಯಲ್ಲಿವೆ.

About the Author

ಡಿ.ವಿ. ಗುರುಪ್ರಸಾದ್

ಲೇಖಕ ಡಿ.ವಿ. ಗುರುಪ್ರಸಾದ್ ಅವರು ನಿವೃತ್ತ ಪೊಲೀಸ್ ಅಧಿಕಾರಿಗಳಾಗಿದ್ದು, ರಾಜ್ಯದ ಪೊಲೀಸ್ ಗುಪ್ತಚರದಳ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವೃತ್ತಿ ಬದುಕಿನ ಅನುಭವ ಮತ್ತು ತಮ್ಮ ವಿಚಾರಗಳನ್ನು ಕೃತಿಗಳ ಮೂಲಕ ದಾಖಲಿಸುವ ಇವರು ಕ್ರೈಂ ಲೋಕದ ವಿಸ್ಮಯ, ವಿಚಿತ್ರ ಸಂಗತಿಗಳನ್ನು ಓದುಗರಮುಂದಿಡುತ್ತಾ ಬಂದಿದ್ದಾರೆ.  ‘ಪೊಲೀಸ್ ಜೀವನದಲ್ಲಿ ಹಾಸ್ಯ', 'ವೀರಪ್ಪನ್ : ದಂತಚೋರನ ಬೆನ್ನಟ್ಟಿ', 'ಕೈಗೆ ಬಂದ ತುತ್ತು’, ‘ಪೊಲೀಸ್ ಎನ್ ಕೌಂಟರ್’, 'ಕ್ರೈಂ ಕಥೆಗಳು', 'ನೀವು ಒಮ್ಮೆ ಫೇಲ್ ಆಗಲೇಬೇಕು', 'ಅಪರಾಧಗಳ ಆ ಕ್ಷಣ', 'ವಿಶ್ವಪರ್ಯಟನೆ', 'ರಾಜೀವ್ ಗಾಂಧಿ ಭೀಕರ ಹತ್ಯೆ', 'ವೈವಿಧ್ಯತೆಯಲ್ಲಿ ಸಾಮ್ಯತೆ -ಯುರೋಪಿನ ಹದಿನಾಲ್ಕು ದೇಶಗಳು', 'ಗಲ್ಲುಗಂಬದ ...

READ MORE

Related Books