ಸಾಹಿತ್ಯ ಸೌರಭ

Author : ಸುರೇಂದ್ರಕುಮಾರ ಕೆರಮಗಿ

Pages 130

₹ 120.00




Year of Publication: 2018
Published by: ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ
Address: ಕಲಬುರಗಿ

Synopsys

ಲೇಖಕ ಡಾ. ಸುರೇಂದ್ರಕುಮಾರ ಕೆರಮಗಿ ಅವರ ‘ಸಾಹಿತ್ಯ ಸೌರಭ’ ಕೃತಿಯು ಲೇಖನಗಳ ಸಂಕಲನ. ಕನ್ನಡ ಕಾದಂಬರಿಗಳಲ್ಲಿ ರಾಷ್ಟ್ರೀಯ ಪ್ರಜ್ಞೆ, ಸಂತ ಶಿಶುನಾಳ ಶರೀಫರ ಅನುಭಾವ ಗೀತೆಗಳು,ಸರ್ವಜ್ಞನ ವಚನಗಳಲ್ಲಿ ಮಹಿಳಾ ಸಂವೇದನೆಗಳು ಸೇರಿದಂತೆ ಕನ್ನಡ ಸಾಹಿತ್ಯಕ್ಕೆ ಸಂಬಂಧಿಸಿದ ಹತ್ತು ಲೇಖನಗಳನ್ನು ಒಳಗೊಂಡಿದೆ. ರಸಾನುಭವದ ಸುಂದರ ಅಭಿವ್ಯಕ್ತಿಯ ಸಾಹಿತ್ಯವೆಂಬ ಮಾತಿನ ಜಾಡು ಹಿಡಿದು ಸಾಹಿತ್ಯದಲ್ಲಿ ರಸ ಮತ್ತು ಅನುಭವಗಳೊಂದಿಗೆ ಮೌಲ್ಯಗಳ ಚಿಂತನೆಯು ಸೇರಿದಂತೆ ಹಳಗನ್ನಡ, ನಡುಗನ್ನಡ ಹಾಗೂ ಹೊಸಗನ್ನಡ ಸಾಹಿತ್ಯಕ್ಕೆ ಸಂಬಂಧಿಸಿದ ಲೇಖನಗಳ ಸಂಗ್ರಹವಾಗಿದೆ.

About the Author

ಸುರೇಂದ್ರಕುಮಾರ ಕೆರಮಗಿ

ಡಾ. ಸುರೇಂದ್ರಕುಮಾರ್ ಕೆರಮಗಿ ಅವರು ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನವರು. ಸ್ವಾಯತ್ತ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಸಹ ಪ್ರಾಧ್ಯಾಪಕರು. "ಡಾ.ಹಾ.ಮಾ ನಾಯಕ ಅವರ ಅಂಕಣ ಸಾಹಿತ್ಯ ಒಂದು ಅಧ್ಯಯನ" ವಿಷಯವಾಗಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯವು ಇವರಿಗೆ ಪಿಎಚ್ ಡಿ ಪ್ರದಾನ ಮಾಡಿದೆ. ಹಳೆಗನ್ನಡ ಸಾಹಿತ್ಯದಲ್ಲೂ ಇವರಿಗೆ ಆಸಕ್ತಿ. ರಾಷ್ಟ್ರೀಯ,ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ಕೃತಿಗಳು: ಆಯ್ದ ವೈಚಾರಿಕ ಪ್ರಬಂಧಗಳ ಸಂಗ್ರಹ, ಹಾ.ಮಾ ನಾಯಕ,ಕನ್ನಡದಲ್ಲಿ ಅಂಕಣ ಸಾಹಿತ್ಯ, ಸೃಷ್ಟಿ ಸೌರಭ, ಮಾತು ಮಥಿ ಸಿದಾಗ, ಸಾಹಿತ್ಯ ಸುಧೆ, ಸಾಹಿತ್ಯ ಸಂಜೀವಿನಿ, ಹೈದರಾಬಾದ ಕರ್ನಾಟಕದ ಪ್ರಮುಖ ಕಾದಂಬರಿಕಾರರು, ಮಡಿವಾಳ ...

READ MORE

Related Books