ಸಾಹಿತ್ಯ ಸುಧೆ

Author : ಸುರೇಂದ್ರಕುಮಾರ ಕೆರಮಗಿ

Pages 182

₹ 100.00




Year of Publication: 2017
Published by: ಸೃಷ್ಟಿ ಸೌರಭ ಪ್ರಕಾಶನ
Address: ಕಲಬುರಗಿ

Synopsys

ಲೇಖಕ ಡಾ. ಸುರೇಂದ್ರಕುಮಾರ ಕೆರಮಗಿ ಅವರ ‘ಸಾಹಿತ್ಯ ಸುಧೆ’ ಕೃತಿಯು ಹಳಗನ್ನಡ, ನಡುಗನ್ನಡ ಸಾಹಿತ್ಯ ಹಾಗೂ ಕಾವ್ಯಮೀಮಾಂಸೆಯನ್ನು ಒಳಗೊಂಡಿದೆ. ಕರ್ನಾಟಕ ಕಾದಂಬರಿ ಆಧರಿಸಿದ ವೈಶಂಪಾಯನ ಸರೋವರದ ಕುರಿತ ಅವಲೋಕನ, ಜನ್ನನ ಯಶೋಧರ ಚರಿತೆಯ ಅವಲೋಕನ, ಡಾಕ್ಟರ ಎಂ.ಎಂ. ಕಲಬುರ್ಗಿ ಅವರು ಕಂಡ ಬಸವಣ್ಣನವರು, ಸತ್ಯಕ್ಕನ ವಚನಗಳಲ್ಲಿ ಸಾಮಾಜಿಕ ಪ್ರಜ್ಞೆ, ಶರಣರ ವಚನಗಳಲ್ಲಿ ಕಾಯಕ ಪ್ರಜ್ಞೆ, ಸೇರಿದಂತೆ 11 ಮಹತ್ವದ ಸಾಹಿತ್ಯಕ ಲೇಖನಗಳು ಒಳಗೊಂಡಿದೆ.

About the Author

ಸುರೇಂದ್ರಕುಮಾರ ಕೆರಮಗಿ

ಡಾ. ಸುರೇಂದ್ರಕುಮಾರ್ ಕೆರಮಗಿ ಅವರು ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನವರು. ಸ್ವಾಯತ್ತ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಸಹ ಪ್ರಾಧ್ಯಾಪಕರು. "ಡಾ.ಹಾ.ಮಾ ನಾಯಕ ಅವರ ಅಂಕಣ ಸಾಹಿತ್ಯ ಒಂದು ಅಧ್ಯಯನ" ವಿಷಯವಾಗಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯವು ಇವರಿಗೆ ಪಿಎಚ್ ಡಿ ಪ್ರದಾನ ಮಾಡಿದೆ. ಹಳೆಗನ್ನಡ ಸಾಹಿತ್ಯದಲ್ಲೂ ಇವರಿಗೆ ಆಸಕ್ತಿ. ರಾಷ್ಟ್ರೀಯ,ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ಕೃತಿಗಳು: ಆಯ್ದ ವೈಚಾರಿಕ ಪ್ರಬಂಧಗಳ ಸಂಗ್ರಹ, ಹಾ.ಮಾ ನಾಯಕ,ಕನ್ನಡದಲ್ಲಿ ಅಂಕಣ ಸಾಹಿತ್ಯ, ಸೃಷ್ಟಿ ಸೌರಭ, ಮಾತು ಮಥಿ ಸಿದಾಗ, ಸಾಹಿತ್ಯ ಸುಧೆ, ಸಾಹಿತ್ಯ ಸಂಜೀವಿನಿ, ಹೈದರಾಬಾದ ಕರ್ನಾಟಕದ ಪ್ರಮುಖ ಕಾದಂಬರಿಕಾರರು, ಮಡಿವಾಳ ...

READ MORE

Related Books