ಸಕೀನಾಳ ಮುತ್ತು

Author : ವಿವೇಕ ಶಾನಭಾಗ

Pages 144

₹ 150.00

Buy Now


Year of Publication: 2021
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು-577417, ತಾಲೂಕು ಸಾಗರ, ಜಿಲ್ಲೆ ಶಿವಮೊಗ್ಗ

Synopsys

ಖ್ಯಾತ ಕಥೆಗಾರ ವಿವೇಕ ಶಾನಭಾಗ ಅವರ ಕಾದಂಬರಿ-ಸಕೀನಾಳ ಮುತ್ತು. ಲೇಖಕರು ಹೇಳುವಂತೆ ‘ಏನೋ ಒಂದು ನಡೆದು ಅದಕ್ಕೆ ಕುಣಿಕೆ ಹಾಕಿ ಮತ್ತೇನೇನೋ ನಡೆಯುತ್ತ ಸಾಗುತ್ತದೆ. ಆದರೆ, ಕಾದಂಬರಿ ಇರುವುದು ನಡೆದಿದ್ದರ ಬಗ್ಗೆಯೋ ಅಥವಾ ನಡೆಯಿತೆಂದು ಗ್ರಹಿಸಲಾಗಿದ್ದರ ಬಗ್ಗೆಯೋ ಅಥವಾ ನಡೆಯಬಹುದಾದ ಸಾಧ್ಯತೆಗಳ ಬಗ್ಗೆಯೋ-ಇಂಥ ಪ್ರಶ್ನೆಗಳು ಈ ಕಾದಂಬರಿಯಲ್ಲಿ ಓದುಗನೆಂಬ ವಿಕ್ರಮನನ್ನು ಬೇತಾಳಗಳಾಗಿ ಕಾಡುತ್ತವೆ. ಹಾಗೆ ಕಥೆ ಕಾಣುವ ಮೂಲಕ ಓದುಗರಿಗೆ -ಸ್ವತಃ ಲೋಕವೇ ಹಾಗಿರಬಹುದೆ, ಸ್ಥಿರವೂ, ನಿಶ್ಚಿತವೂ ಎಂದು ತಿಳಿದ ಈ ಜೀವನ ವ್ಯಾಪಾರಗಳು ಕೇವಲ ಮನೋನಿರ್ಮಿತಗಳೆ? ಎಂಬೊಂದು ಗುಮಾನಿ ಉದ್ಭವಿಸಿದರೆ ಅದು ಕಾಕತಾಳೀಯವಾಗಿರಲಾರದೇನೋ...’ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ವಿವೇಕ ಶಾನಭಾಗ

ವಿವೇಕ  ಶಾನಭಾಗ ಅವರು ಉತ್ತರ ಕನ್ನಡ ಜಿಲ್ಲೆಯವರು. ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರಾದ ವಿವೇಕ ಅವರು 'ದೇಶಕಾಲ' ಎಂಬ ಸಾಹಿತ್ಯಕ ಪತ್ರಿಕೆಯನ್ನೂ ಏಳು ವರ್ಷ ಕಾಲ ನಡೆಸಿದರು. ಹೊಸ ಬಗೆಯ ಕಥೆ ಕಟ್ಟುವ ಅವರು ಸಣ್ಣ ಊರು ಅಥವಾ ವಿಶಾಲ ಜಗತ್ತುಗಳೆರಡರಲ್ಲಿಯೂ ಮನುಷ್ಯರ ಮನಸ್ಸಿನ ಆಯಾಮ ಗುರುತಿಸಬಲ್ಲರು. ಅವರ ’ಘಾಚರ್ ಘೋಚರ್ ನೀಳ್ಗತೆಯ ಇಂಗ್ಲಿಷ್ ಅನುವಾದ ಜಗತ್ತಿನ ಸಾಹಿತ್ಯ ವಲಯದ ಗಮನ ಸೆಳೆದಿದೆ. ಲಂಡನ್, ಅಮೆರಿಕಗಳಲ್ಲಿ ಪ್ರತ್ಯೇಕ ಆವೃತ್ತಿ ಕಂಡಿರುವ ಈ ಕೃತಿ ಜಗತ್ತಿನ 18 ಭಾಷೆಗಳಿಗೆ ಅನುವಾದಗೊಂಡು ಮಚ್ಚುಗೆ ಗಳಿಸಿದೆ. ಅಂಕುರ, ಲಂಗರು, ಹುಲಿಸವಾರಿ, ಮತ್ತೊಬ್ಬನ ...

READ MORE

Related Books