ಸಾಲಿಗುಡಿ ಸಂಭ್ರಮ- 25

Author : ಲಿಂಗರಾಜ ರಾಮಾಪೂರ

Pages 80

₹ 80.00




Year of Publication: 2023
Published by: ಚಿಲಿಪಿಲಿ ಪ್ರಕಾಶನ, ಧಾರವಾಡ
Address: ಚಿಲಿಪಿಲಿ ಪ್ರಕಾಶನ, ಧಾರವಾಡ
Phone: 9945176766

Synopsys

ಗ್ರಾಮೀಣ ಪ್ರದೇಶದ ಜನಜೀವನ ಸುಧಾರಣೆಯಾಗಬೇಕಿದ್ದರೆ ಅದಕ್ಕೆ ಶಿಕ್ಷಣವೇ ಕಾರಣ. ಇಲ್ಲಿನ ಹಿರಿಯರ ಒಗ್ಗಟ್ಟು, ಶೈಕ್ಷಣಿಕ ನಡತೆ ಗಮನಿಸಿದರೆ ಕಿರೇಸೂರು ಒಂದು ಆದರ್ಶ ಗ್ರಾಮವೇ ಸರಿ. ಸರ್ವದಾನಗಳಲ್ಲಿ ಶ್ರೇಷ್ಠ ದಾನ ವಿದ್ಯಾದಾನವೇ ಆಗಿದೆ. ಇಲ್ಲಿಯ ಶಿಕ್ಷಕರು ಅಂತಹ ಶ್ರೇಷ್ಠ ದಾನವನ್ನು ಮಾಡುತ್ತಾ ಮಕ್ಕಳಲ್ಲಿ ನೈತಿಕತೆಯನ್ನು ಬೆಳೆಸುತ್ತಾ ಒಳ್ಳೆಯ ಶಿಕ್ಷಣವನ್ನು ನೀಡುತ್ತಾ ಬಂದಿದ್ದಾರೆ. ಈ ಶಾಲೆಯಲ್ಲಿ ಕಲಿತ ಬಹುತೇಕರು ಸಮಾಜದ ವಿವಿಧ ರಂಗಗಳಲ್ಲಿ ಉತ್ತಮ ಸೇವಾ ಸಲ್ಲಿಸುತ್ತಾ ಗ್ರಾಮದ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಈಗ ಈ ಶಿಕ್ಷಣ ಸಂಸ್ಥೆ ಬೆಳ್ಳಿ ವರ್ಷಾಚರಣೆ ಆಚರಿಸಿಕೊಳ್ಳುತ್ತಿರುವುದು ತುಂಬಾ ಸಂತಸದ ಸಂಗತಿ. ಬೆಳ್ಳಿ ಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಶಿಕ್ಷಕ ಸಾಹಿತಿ ಡಾ.ಲಿಂಗರಾಜ ರಾಮಾಪೂರ ಅವರ ಸಂಪಾದಕತ್ವದಲ್ಲಿ ‘ಸಾಲಿಗುಡಿ ಸಂಭ್ರಮ-25’ ಎಂಬ ಸ್ಮರಣಸಂಚಿಕೆಯನ್ನು ಹೊರತರುತ್ತಿರುವುದು ಒಂದು ಮೈಲುಗಲ್ಲು.

About the Author

ಲಿಂಗರಾಜ ರಾಮಾಪೂರ
(22 July 1978)

ಡಾ.ಲಿಂಗರಾಜ ರಾಮಾಪೂರ ವ್ರತ್ತಿಯಲ್ಲಿ ಶಿಕ್ಷಕರು. ಪ್ರವ್ರತ್ತಿಯಲ್ಲಿ ಬರಹಗಾರರು. ಪ್ರಸ್ತುತ ಹುಬ್ಬಳ್ಳಿ ತಾಲೂಕು ಕಿರೇಸೂರ ಸರಕಾರಿ ಪ್ರೌಢಶಾಲೆಯ ಆಂಗ್ಲ ಭಾಷೆಯ ಶಿಕ್ಷಕ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಕ್ಕಳ ಸಾಹಿತ್ಯದ ಎಲ್ಲ ಪ್ರಕಾರಗಳ ಕ್ರಷಿ ಮಾಡಿದ್ದಾರೆ. 25ಕೂ ಹೆಚ್ಚು ಕೃತಿ ರಚಿಸಿದ್ದಾರೆ. 200ಕೂ ಹೆಚ್ಚು ಲೇಖನ ಪ್ರಕಟಿಸಿದ್ದಾರೆ. ಹುಗ್ಗಿ ಅಂದ್ರ ಹಿಂಗೈತಿ, ಪುಟ್ಟರಾಜ, ಭೂಮಿ ಮಾರಾಟಕ್ಕಿಲ್ಲ, ನಿಸಗ೯ ನ್ಯಾಯ, ನೀರ್ ಬಾರ್ ಮಕ್ಕಳ ನಾಟಕ ಕೃತಿಗಳು. ಪರಿಸರದೊಳಗಿನ ಸತ್ಯದ ಮಾತು, ವಿಜ್ಞಾನದ ಬೆಳಕಿನಲ್ಲಿ ಇವು ಬರಹಗಳನ್ನೊಳಗೊಂಡ ಕೃತಿಗಳು. ಗುಬ್ಬಿಗೊಂದು ಮನೆ ಮಾಡಿ ಮಕ್ಕಳ ಕಾದಂಬರಿ. ಶಿಕ್ಷಕನ ನೋಟದಲ್ಲಿ ಅಮೇರಿಕಾ, ವಿಜ್ಞಾನದ ...

READ MORE

Related Books