ಸಲ್ಮಾ ಮತ್ತು ಸುರಭಿ

Author : ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)

Pages 124

₹ 125.00




Year of Publication: 2020
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಕರ್ನಾಟಕ- 577417

Synopsys

‘ಸಲ್ಮಾ ಮತ್ತು ಸುರಭಿ’ ಲೇಖಕಿ ವೈದೇಹಿ ಅವರ ಕತಾಸಂಕಲನ. ಅಕ್ಷರ ಪ್ರಕಾಶನದಿಂದ ಪ್ರಕಟಗೊಂಡ ಈ ಕೃತಿಗೆ ಹಿರಿಯ ಲೇಖಕ ರಾಜೇಂದ್ರ ಚೆನ್ನಿ ಬೆನ್ನುಡಿ ಬರೆದಿದ್ದಾರೆ. ‘ವೈದೇಹಿ ಕತೆಗಳನ್ನು ಓದುವುದೆಂದರೆ ಅತ್ಯಂತ ಸೂಕ್ಷ್ಮವಾದ ಶ್ರಾವಣ ಪ್ರತಿಭೆಯೊಂದರ ಮೂಲಕ ಜಗತ್ತನ್ನು ಗ್ರಹಿಸುವ ಕೆಲಸ. ವೈದೇಹಿಯವರ ಕತೆಗಳ ಪಾತ್ರಗಳ ಹುಟ್ಟು, ಅಸ್ತಿತ್ವಗಳು ಅವುಗಳಿಗೆ ವಿಶಿಷ್ಟವಾದ, ಅವುಗಳ ಸಂವೇದನೆಯ ಅವಿಭಾಜ್ಯ ಅಂಶವಾಗಿ, ಕರ್ಣನಿಗೆ ಕವಚ ಕುಂಡಲಗಳಿದ್ದಂತೆ ಇರುವ, ಅವುಗಳ ಮಾತಿನಲ್ಲಿವೆ. ನಮ್ಮ ಓದಿನಲ್ಲಿ ಈ ಪಾತ್ರಗಳು ಪ್ರತ್ಯಕ್ಷವಾಗುವುದು, ನಮ್ಮ ಅನುಭವಲೋಕವನ್ನು ಪ್ರವೇಶಮಾಡಿ ನಿಲ್ಲುವುದು ಅವುಗಳ ಮಾತಿನಿಂದಲೇ. ಇದು ಕೇವಲ ಕತೆಗಾತಿಯ ಜಾಣ್ಮೆ ಅಥವಾ ಕೌಶಲ್ಯದ ವಿಷಯವಲ್ಲ. ಅಥವಾ ಅವರು ಬಳಸುವ ಪ್ರಾದೇಶಿಕ ಭಾಷೆಯ ಸೊಗಡಿನ ವಿಷಯವಲ್ಲ. ಮನುಷ್ಯರ ಅಂತರಂಗದ ಅತ್ಯಂತ ಅನಿರೀಕ್ಷಿತವಾದ, ಗೋಚರಕ್ಕೂ ಬರದಷ್ಟು ಸೂಕ್ಷ್ಮವಾದ, ಸಂಗ್ರಹಿಸಿ ಹೇಳಹೊರಟರೆ ತಮ್ಮ ನೈಜ ಸಂಕೀರ್ಣತೆಯನ್ನು ಕಳೆದುಕೊಂಡು ಉಡುಗಿ ಹೋಗುವಂತಹ ವಿಶಿಷ್ಟವಾದ ಆ ಕ್ಷಣದ್ದೇ ಆದರೂ ಆಯಾ ವ್ಯಕ್ತಿಗಳ ಶೀಲವನ್ನು ಅಭಿವ್ಯಕ್ತಿಸುವ ಮಾಧ್ಯಮವಾಗಿ ಇರುವ ಮಾತುಗಳ ಬಗ್ಗೆ ನಾನು ಹೇಳುತ್ತಿದ್ದೇನೆ ಎನ್ನುತ್ತಾರೆ ರಾಜೇಂದ್ರ ಚೆನ್ನಿ. ಕತೆಗಾತಿಯಾದ ವೈದೇಹಿಯವರ ಶಕ್ತಿಯಿರುವುದು ಈ ಮಾತಿನ ಪ್ರಪಂಚವನ್ನು, ವಾಸ್ತವ ಪ್ರಪಂಚದಷ್ಟೇ ಮೂರ್ತವಾದ, ಸಾಂದ್ರವಾದ, ನಿಬಿಡವಾದ ಮಾತಿನ ಪ್ರಪಂಚವನ್ನು ನಿರ್ಮಿಸುವುದರಲ್ಲಿ. ಅವರ ಕತೆಗಳಲ್ಲಿ ಆಗುವುದು ನಡೆಯುವುದು ಇವುಗಳ ಅಂಶ ಕಡಿಮೆಯೇ. ಆದರೆ ಮಾತುಗಳ ಮೂಲಕ ‘ಘಟಿಸುವುದು’ ಮಾತ್ರ ಅಚ್ಚರಿ ಹುಟ್ಟಿಸುವಷ್ಟು ವೈವಿಧ್ಯಪೂಣವಾಗಿದೆ, ಸಂಕೀರ್ಣವಾಗಿದೆ ಎಂಬುದು ರಾಜೇಂದ್ರ ಚೆನ್ನಿ ಅವರ ಅಭಿಪ್ರಾಯ.

About the Author

ವೈದೇಹಿ (ಜಾನಕಿ ಶ್ರೀನಿವಾಸಮೂರ್ತಿ)
(12 February 1945)

ಡಾ. ವೈದೇಹಿ ಅವರ ಮೂಲ ಹೆಸರು ಜಾನಕಿ ಶ್ರೀನಿವಾಸಮೂರ್ತಿ.  ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜನಿಸಿದ ಅವರು ಕಾವ್ಯ, ಪ್ರಬಂಧ, ಮಕ್ಕಳ ಸಾಹಿತ್ಯ, ಜೀವನಚಿತ್ರ, ಕೃತಿ ಸಂಪಾದನೆ ಪ್ರಕಾರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮಾನವ ಸಹಜ ಸಂಬಂಧಗಳು ಮತ್ತು ಹೆಣ್ಣಿನ ಭಾವತರಂಗಗಳನ್ನು ಹಿಡಿದಿಡುವ ಕಥೆ-ಕಾದಂಬರಿ ರಚಿಸಿರುವ ಲೇಖಕಿ. ಮರಗಿಡಬಳ್ಳಿ ಅಂತರಂಗದ ಪುಟಗಳು ಸಮಾಜಶಾಸ್ತ್ರಜ್ಞೆಯ ಟಿಪ್ಪಣಿಗಳು, ಅಮ್ಮಚ್ಚಿ ಎಂಬ ನೆನಪು. ಕತೆ ಕತೆ ಕಾರಣ (ಕಥಾ ಸಂಕಲನಗಳು), ಅಲೆಗಳಲ್ಲಿ ತರಂಗ (ಸಮಗ್ರ ಕಥಾ ಸಂಕಲನ), ಬಿಂದು ಬಿಂದಿಗೆ, ಪಾರಿಜಾತ ಹೂವ ಕಟ್ಟುವ ಕಾಯಕ (ಕವನ ಸಂಕಲನ), ಅಸ್ಪೃಶ್ಯರು (ಕಾದಂಬರಿ), ಮಲ್ಲಿನಾಥನ ಧ್ಯಾನ, ಮೇಜು ಮತ್ತು ...

READ MORE

Related Books