ಸಮಾಜಮುಖಿ

Author : ಎನ್. ಜಗದೀಶ್ ಕೊಪ್ಪ

Pages 672

₹ 650.00




Year of Publication: 2021
Published by: ಕರ್ನಾಟಕ ಸಂಘ
Address: ಜಗದ್ಗುರು ತೋಂಟದ ವಿದ್ಯಾಪೀಠ, ಹಿರೇಮಲ್ಲೂರು ಈಶ್ವರನ್ ಪದವಿಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಕಲ್ಯಾಣನಗರ, ಧಾರವಾಡ-07

Synopsys

ಗದುಗಿನ ಜಗದ್ಗುರು ಶ್ರೀ ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮೃತಿ ಸಂಚಯ ಎಂಬ ಉಪಶೀರ್ಷಿಕೆಯಡಿ ಲೇಖಕರಾದ ಎನ್. ಜಗದೀಶ ಕೊಪ್ಪ ಹಾಗೂ ಶಶಧರ ತೋಡಕರ ಅವರ ಸಂಪಾದಕತ್ವದ ಕೃತಿ-ಸಮಾಜಮುಖಿ. ಶ್ರೀ ತೋಂಟದಾರ್ಯ ಸಿದ್ಧಲಿಂಗ ಮಹಾಸ್ವಾಮಿಗಳ ಸಮಾಜಸೇವೆ, 12ನೇ ಶತಮಾನದ ಬಸವಣ್ಣ ಸೇರಿದಂತೆ ಎಲ್ಲ ಶರಣರ ನಡೆ-ನುಡಿಯನ್ನು ತಮ್ಮ ಬದುಕಿ ಜೀವಾಳವಾಗಿಸಿಕೊಂಡಿದ್ದ ಅವರ ಬದುಕು-ಸಾಧನೆ, ಗ್ರಂಥ ಪ್ರಕಟಣೆ, ದಾಸೋಹ ಇತ್ಯಾದಿ ಸೇವೆಗಳನ್ನು ಪರಿಚಯಿಸಲು ವಿವಿಧ ಲೇಖಕರು ಬರೆದ ಲೇಖನಗಳ ಸಂಗ್ರಹವಿದು. ಕೃತಿಗೆ ಬೆನ್ನುಡಿ ಬರೆದ ಕವಿ ಚೆನ್ನವೀರ ಕಣವಿ ‘ಮಠೀಯ ಧಾರ್ಮಿಕ ವ್ಯವಸ್ಥೆಯಲ್ಲಿ ಗೊಡ್ಡು ಸಂಪ್ರದಾಯ, ಕಂದಾಚಾರಗಳ ಬುಡಮಟ್ಟ ಕಿತ್ತು, ಒಂದು ಶತಮಾನದ ಕಾರ್ಯ ನಾಲ್ಕು ದಶಕದಲ್ಲಿ ಮಾಡಿದ ಆರ್ಯ’ ಎಂದು ಶ್ರೀ ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿ ಅವರ ಘನ ವ್ಯಕ್ತಿತ್ವವನ್ನು ಪ್ರಶಂಸಿಸಿದ್ದಾರೆ.

 

About the Author

ಎನ್. ಜಗದೀಶ್ ಕೊಪ್ಪ

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ 1956 ರಲ್ಲಿ ರೈತ ಕುಟುಂಬದಲ್ಲಿ ಜನನ. ಬೆಂಗಳೂರು ವಿ.ವಿ.ಪುರಂ ಕಾಲೇಜಿನಿಂದ ಬಿ.ಎ. ಪದವಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ಎಂ.ಎ. ಪದವಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾನಿಯದಿಂದ ‘ ಜಾಗತೀಕರಣ ಮತ್ತು ಗ್ರಾಮ ಭಾರತ’ ಪೌಢಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದರು. 1981 ರಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು 2018 ರವರೆಗೆ ಹುಬ್ಬಳ್ಳಿ ನಗರದಲ್ಲಿ ಉದಯಟಿ.ವಿ.ಸಂಸ್ಥೆಯ ಉತ್ತರ ಕರ್ನಾಟಕ ಪ್ರಾದೇಶಿಕ ಕಚೇರಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ಇದೀಗ ಮೈಸೂರು ನಗರದಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. 1995 ರಲ್ಲಿ ಸುಮ್ಮಾನದ ಪದ್ಯಗಳು ಕೃತಿಯ ಮೂಲಕ ...

READ MORE

Related Books